ಆ್ಯಪ್ನಗರ

ರಾಜ್ಯದ ಬೆಳವಣಿಗೆಗೆ ಮೋದಿ, ಅಮಿತ್ ಶಾ ಕುದುರೆ ವ್ಯಾಪಾರ ಕಾರಣ: ಎಚ್‌.ಕೆ. ಪಾಟೀಲ್‌

ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಬಿಜೆಪಿಯವರು ಸರಕಾರ ರಚಿಸುವ ಪ್ರಕ್ರಿಯೆಯಲ್ಲಿ ವಿಫಲರಾಗಬೇಕು. ಅತೃಪ್ತರು ವಾಪಸ್ ಬಂದ್ರೆ ಸರಕಾರ ಉಳಿಯುತ್ತೆ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

Vijaya Karnataka Web 11 Jul 2019, 3:53 pm
ಗದಗ: ರಾಜ್ಯದಲ್ಲಿನ ಬೆಳವಣಿಗೆಗೆ ಮೋದಿ ಹಾಗೂ ಅಮಿತ್ ಶಾ ಅವರ ಕುದುರೆ ವ್ಯಾಪಾರವೇ ಕಾರಣ ಎಂದು ಶಾಸಕ ಎಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ಕುದುರೆ ವ್ಯಾಪಾರ ಮಾಡ್ತಿದ್ದಾರೆ. ಆದರೆ ಅವರು ಯಶಸ್ವಿಯಾಗಲ್ಲ ಎಂದು ಹೇಳಿದ್ದಾರೆ.
Vijaya Karnataka Web hk patil


ಪಕ್ಷದ ಶಾಸಕ ಡಾ.ಸುಧಾಕರ್ ಅವ್ರನ್ನು ಹಿಡಿದುಕೊಂಡು ಹೋಗೋಕೆ ಹೇಗೆ ಬಂದಿದ್ರು ಅನ್ನೋದನ್ನು ನೋಡಿದ್ದೇವೆ. ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಬಿಜೆಪಿಯವರು ಸರಕಾರ ರಚಿಸುವ ಪ್ರಕ್ರಿಯೆಯಲ್ಲಿ ವಿಫಲರಾಗಬೇಕು. ಅತೃಪ್ತರು ವಾಪಸ್ ಬಂದ್ರೆ ಸರಕಾರ ಉಳಿಯುತ್ತೆ. ಅವರು ಯಾವ ಕಂಡೀಷನ್ ಹಾಕಿದ್ದಾರೆ ಅಂತ ದೇಶದ ಜನ ಹಾಗೂ ಸುಪ್ರಿಂ ಕೋರ್ಟ್ ನೋಡಬೇಕು. ಅತೃಪ್ತ ಶಾಸಕರ ನಡೆಯನ್ನು ಜನ ನೋಡ್ತಿದ್ದಾರೆ. ಜನರು ಮುಗ್ದರಿರಬಹುದು ಆದ್ರೆ ದಡ್ಡರಲ್ಲ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು, ಜಿಂದಾಲ್‌ಗೆ ಭೂಮಿ‌ ನೀಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಎಚ್‌.ಕೆ. ಪಾಟೀಲ್, ಎಂ.ಬಿ. ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಭೆಯಲ್ಲಿ ಯಾವುದೇ ನಿರ್ಧಾರವಾಗಿಲ್ಲ ಇದನ್ನು ಎಂ. ಬಿ. ಪಾಟೀಲ್ ಅವರೇ ಸ್ಪಷ್ಟಪಡಿಸಿದ್ದಾರೆ. ಇದರ ಕುರಿತು ತಪ್ಪು ಮಾಹಿತಿ ರವಾನೆಯಾಗುತ್ತಿದೆ ಎಂದು ಅವರು ಹೇಳಿದರು.

ಇನ್ನೊಂದೆಡೆ, ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಯಾರಾಗಬೇಕೋ ಅವರು ಸಿಎಂ ಆಗ್ತಾರೆ ಎಂದು ಗದಗದಲ್ಲಿ ಶಾಸಕ ಎಚ್.ಕೆ.ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ