ಆ್ಯಪ್ನಗರ

ಸಂವಿಧಾನ ದಿನ, ಪ್ರತಿಜ್ಞಾ ವಿಧಿ ಸ್ವೀಕಾರ

ಗದಗ: ಸಂವಿಧಾನ ದಿನದ ಅಂಗವಾಗಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲನಲ್ಲಿಮಂಗಳವಾರ ಭಾರತ ದೇಶವನ್ನು ಒಂದು ಸಾರ್ವಭೌಮ ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸುವ ಪ್ರಮಾಣ ವಚನ ಸ್ವೀಕಾರ ಕಾರ‍್ಯಕ್ರಮ ಜರುಗಿತು.

Vijaya Karnataka 27 Nov 2019, 5:25 pm
ಗದಗ: ಸಂವಿಧಾನ ದಿನದ ಅಂಗವಾಗಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲನಲ್ಲಿಮಂಗಳವಾರ ಭಾರತ ದೇಶವನ್ನು ಒಂದು ಸಾರ್ವಭೌಮ ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸುವ ಪ್ರಮಾಣ ವಚನ ಸ್ವೀಕಾರ ಕಾರ‍್ಯಕ್ರಮ ಜರುಗಿತು.
Vijaya Karnataka Web constitution day acceptance of oath
ಸಂವಿಧಾನ ದಿನ, ಪ್ರತಿಜ್ಞಾ ವಿಧಿ ಸ್ವೀಕಾರ


ಜಿಲ್ಲಾಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಖಾಜಾ ಹುಸೇನ ಮುಧೋಳ ಅವರು ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆಯ ಪ್ರಮಾಣ ವಚನವನ್ನು ಬೋಧಿಸಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಶಗಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸಂವಿಧಾನ ದಿನ ಕಾರ್ಯಕ್ರಮದಲ್ಲಿಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪಿಪಿಜಿ ಸಂಗೀತ ಮಹಾವಿದ್ಯಾಲಯ:
ಪಂ.ಪಂಚಾಕ್ಷರ ಗವಾಯಿಗಳವರ ಹಾಗೂ ಸಂಗೀತ ಸ್ನಾತಕ ಕೇಂದ್ರದಲ್ಲಿಸಂವಿಧಾನ ದಿನ ಕಾರ್ಯಕ್ರಮದ ನಡೆಯಿತು.ಪ್ರೊ.ಜಿ.ಟಿ. ಹಿಡ್ಕಿಮಠ ಮಾತನಾಡಿ, ಡಾ.ಬಿ.ಆರ್‌. ಅಂಬೇಡ್ಕರ್‌ ಮತ್ತು ಸಮಿತಿ ಸದಸ್ಯರು ಭಾರತ ದೇಶಕ್ಕೆ ಸಮರ್ಪಿಸಿದ ಸಂವಿಧಾನವನ್ನು ಅಂಗೀಕರಿಸಲಾಯಿತು. ಇದು 1950ರ ಜನೆವರಿ 26ರಂದು ಅನುಷ್ಠಾನಕ್ಕೆ ತರಲಾಯಿತು. ಇದು ಭಾರತದ ಇತಿಹಾಸದಲ್ಲಿಹೊಸ ಶಕೆಯನ್ನು ಆರಂಬಿಸಿತು ಎಂದರು.

ಪ್ರಾಚಾರ್ಯ ಡಾ.ಎಸ್‌.ಬಿ.ಪಾಠಕ ಅಧ್ಯಕ್ಷತೆವಹಿಸಿ, ಸಂವಿಧಾನದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಬಗ್ಗೆ ತಿಳಿಸಿದರು. ಎಸ್‌.ಸಿ.ಹಿರೇಮಠ, ಪಿ.ವಿ.ಹಿರೇಮಠ, ಗೌರಿ ಸ್ವಾಮಿ, ಮೆಘಮಾಲಾ, ಶಿವಕುಮಾರ ಗದ್ದಗಿಮಠ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ