ಆ್ಯಪ್ನಗರ

ಗ್ರಾಮಾಭಿವೃದ್ಧಿಯಾದರೆ ದೇಶ ಅಭಿವೃದ್ಧಿ

ಗದಗ : ರಾಷ್ಟ್ರ ಪುನರ್‌ನಿರ್ಮಾಣವಾಗಬೇಕಾದರೆ ಗ್ರಾಮಗಳು ಸಮಗ್ರ ಅಭಿವೃದ್ಧಿ ಹೊಂದಬೇಕು. ಒಂದು ದೇಶದ ಅಭಿವೃದ್ಧಿಯು ಆ ದೇಶದ ಹಳ್ಳಿಗಳಿಗೆ ದೊರೆಯುವ ಸೌಲಭ್ಯಗಳ ಮೇಲೆ ಆಧರಿತವಾಗಿದೆ. ಸರಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಗ್ರಾಮೀಣ ಜನರು ಸಾಕ್ಷ ರರಾಗಿ, ಇಚ್ಛಾಶಕ್ತಿ ಹೊಂದುವುದು ಅನಿವಾರ್ಯವಾಗಿದೆ ಎಂದು ಮುಂಡರಗಿ ತಾಪಂ ಅಧ್ಯಕ್ಷೆ ರೇಣುಕಾ ಕೊರ್ಲಹಳ್ಳಿ ಹೇಳಿದರು.

Vijaya Karnataka 26 Feb 2019, 5:00 am
ಗದಗ : ರಾಷ್ಟ್ರ ಪುನರ್‌ನಿರ್ಮಾಣವಾಗಬೇಕಾದರೆ ಗ್ರಾಮಗಳು ಸಮಗ್ರ ಅಭಿವೃದ್ಧಿ ಹೊಂದಬೇಕು. ಒಂದು ದೇಶದ ಅಭಿವೃದ್ಧಿಯು ಆ ದೇಶದ ಹಳ್ಳಿಗಳಿಗೆ ದೊರೆಯುವ ಸೌಲಭ್ಯಗಳ ಮೇಲೆ ಆಧರಿತವಾಗಿದೆ. ಸರಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಗ್ರಾಮೀಣ ಜನರು ಸಾಕ್ಷ ರರಾಗಿ, ಇಚ್ಛಾಶಕ್ತಿ ಹೊಂದುವುದು ಅನಿವಾರ್ಯವಾಗಿದೆ ಎಂದು ಮುಂಡರಗಿ ತಾಪಂ ಅಧ್ಯಕ್ಷೆ ರೇಣುಕಾ ಕೊರ್ಲಹಳ್ಳಿ ಹೇಳಿದರು.
Vijaya Karnataka Web GDG-25RUDRAGOUD3
ಡಂಬಳದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್‌ಎಸ್‌ಎಸ್‌ ವಿಶೇಷ ಶಿಬಿರವನ್ನು ತಾಪಂ ಅಧ್ಯಕ್ಷೆ ರೇಣುಕಾ ಕೊರ್ಲಹಳ್ಳಿ ಉದ್ಘಾಟಿಸಿದರು.


ಡಂಬಳದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್‌ಎಸ್‌ಎಸ್‌ ಘಟಕದ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಜನರಿಗೆ ಗ್ರಾಮನೈರ್ಮಲ್ಯ, ಮತದಾನ, ಆರೋಗ್ಯ ಮುಂತಾದ ವಿಷಯಗಳ ಬಗೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಗ್ರಾಪಂ ಸದಸ್ಯ ಗೋಣಿ ಬಸಪ್ಪ ಕೊರ್ಲಹಳ್ಳಿ ಮಾತನಾಡಿ, ಗಾಂಧೀಜಿಯ ಗ್ರಾಮಸ್ವರಾಜ್ಯದ ಕನಸು ನನಸಾಗಬೇಕಾದರೆ ಗ್ರಾಮೀಣ ಜನರು ಪರಿಸರ, ಆರೋಗ್ಯ, ನೈತಿಕ-ಸಾಮಾಜಿಕ ವಿಷಯಗಳ ಬಗೆಗೆ ಕಾಳಜಿ ಹೊಂದಿರಬೇಕು ಎಂದರು.

ಜಿ.ವಿ.ಹಿರೇಮಠ ಮಾತನಾಡಿ, ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು, ದೈಹಿಕ-ಮಾನಸಿಕವಾಗಿ ಸದೃಢÜರಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಲು ಬದ್ಧರಾಗಬೇಕು ಎಂದರು.

ಪ್ರಾ.ಎಂ.ಎಂ. ಬುರಡಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಗಂಗಾವತಿ, ಶಂಕ್ರಪ್ಪ ಗಡಗಿ, ಕುಬೇರಪ್ಪ, ವಿಜಯಾ ಕರವೀರಮಠ, ಪ್ರೊ.ಪಂಪಾಪತಿ, ಪ್ರೊ.ಕೆ.ಎಸ್‌.ಮಲ್ಲಾಪೂರ, ಪ್ರೊ.ಕೆ.ಎಸ್‌.ಅಣ್ಣಿಗೇರಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ