ಆ್ಯಪ್ನಗರ

ದಂಡಿನ ದುರ್ಗಮ್ಮ ಜಾತ್ರೆಯ ಸಂಭ್ರಮ

ಗದಗ : ಸ್ಥಳೀಯ ಬೆಟಗೇರಿ ಹೊರ ವಲಯದ ದಂಡಿನ ದುರ್ಗಮ್ಮ ದೇವಿ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯಿತು. ಪ್ರತಿ ವರ್ಷದ ಸಂಪ್ರದಾಯದಂತೆ ನಡæಯುವ ಜಾತ್ರೆಯಲ್ಲಿ ಮಕ್ಕಳು, ಯುವಕ-ಯುವತಿಯರು ಸೇರಿದಂತೆ ವಿವಿಧ ವಯೋಮಾನದ ಭಕ್ತರು ದೀಡ್‌ ನಮಸ್ಕಾರ ಹಾಕಿ ಹರಕೆ ತೀರಿಸಿದರು.

Vijaya Karnataka 29 May 2019, 5:00 am
ಗದಗ : ಸ್ಥಳೀಯ ಬೆಟಗೇರಿ ಹೊರ ವಲಯದ ದಂಡಿನ ದುರ್ಗಮ್ಮ ದೇವಿ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯಿತು.
Vijaya Karnataka Web GDG-28RUDRAGOUD11E
ದಂಡಿನ ದುರ್ಗಮ್ಮ ದೇವಿಗೆ ನೈವೇದ್ಯ ಅರ್ಪಿಸಿ, ದರ್ಶನಾಶೀರ್ವಾದ ಪಡೆಯುತ್ತಿರುವ ಭಕ್ತರು.

ಪ್ರತಿ ವರ್ಷದ ಸಂಪ್ರದಾಯದಂತೆ ನಡæಯುವ ಜಾತ್ರೆಯಲ್ಲಿ ಮಕ್ಕಳು, ಯುವಕ-ಯುವತಿಯರು ಸೇರಿದಂತೆ ವಿವಿಧ ವಯೋಮಾನದ ಭಕ್ತರು ದೀಡ್‌ ನಮಸ್ಕಾರ ಹಾಕಿ ಹರಕೆ ತೀರಿಸಿದರು.

ನಾಗಸಮುದ್ರ ಸಮೀಪದ ಮುಖ್ಯರಸ್ತೆಯಲ್ಲಿರುವ ದಂಡಿನ ದುರ್ಗಮ್ಮ ದೇವಿ ಜಾತ್ರೆ ಹಲವು ದಶಕಗಳಿಂದ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರ, ಗೋವಾ, ದೆಹಲಿ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳ ಹರಣ ಶಿಖಾರಿ ಜನಾಂಗದ ಸಾವಿರಾರು ಭಕ್ತರು ದೇವಿಯನ್ನು ಆರಾಧಿಸುತ್ತಾರೆ.

ದೇವಿ ಆಶೀರ್ವಾದಕ್ಕಾಗಿ ಭಕ್ತರು ಜಾತ್ರೆಯಲ್ಲಿ ಹಲವು ಆಚರಣೆ, ಸಂಪ್ರದಾಯದಂತೆ ದೇವಿಗೆ ಭಕ್ತಿ ಸಮರ್ಪಿಸಿದರು. ಬೆಳಗಿನ ಜಾವದಿಂದ ಮಧ್ಯಾಹ್ನ 12 ಗಂಟೆವರೆಗೆ ನೈವೇದ್ಯ ಅರ್ಪಣೆ, ಹರಕೆ ತೀರಿಸುವ ವಿಧಿವಿಧಾನಗಳು ನಡೆದವು.

ಜಾತ್ರಾ ಸಂಭ್ರಮದಲ್ಲಿ ಮಿಂದೆದ್ದ ಭಕ್ತರು:

ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಹರಣ ಶಿಖಾರಿ ಜನಾಂಗದ ಸಾವಿರಾರು ಭಕ್ತರು ಮಂಗಳವಾರ ಬೆಳಗ್ಗೆಯಿಂದಲೇ ದೇವಿಗೆ ಹರಕೆ ತೀರಿಸಲು ಸನ್ನದ್ಧರಾಗಿದ್ದರು. ತಾಯಿ ದುರ್ಗಮ್ಮಗೆ ಜಲ, ಕ್ಷೀರಾಭಿಷೇಕ ನೆರವೇರಿಸಿದರು. ಬಳಿಕ ಹೂವಿನ ಅಲಂಕಾರ ಮಾಡಿ, ವಿಶೇಷ ಪೂಜೆ ನೆರವೇರಿಸಲಾಯಿತು. ಭಕ್ತರು ಹೂವು, ಹಣ್ಣು, ಕಾಯಿಗಳೊಂದಿಗೆ ದೇವಿಗೆ ನೈವೇದ್ಯ ಅರ್ಪಿಸಿ ದರ್ಶನಾಶೀರ್ವಾದ ಪಡೆದರು. ದೇಶದ ವಿವಿಧ ಭಾಗದಲ್ಲಿ ಹಂಚಿಹೋಗುವ ಭಕ್ತರು ಪ್ರತಿ ವರ್ಷ ದೇವಿ ಜಾತ್ರೆಗೆ ಒಂದೆಡೆ ಸೇರುವುದು ವಿಶೇಷ. ಈ ಜಾತ್ರೆ ಮೂಲಕವೇ ಆಯಾ ವರ್ಷದ ತಮ್ಮ ಕಾರ್ಯಚಟುವಟಿಕೆಯನ್ನು ಅವರು ಆರಂಭಿಸುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ