ಆ್ಯಪ್ನಗರ

ಹಲ್ಲೆಖಂಡಿಸಿ ದಸಂಸ ಪ್ರತಿಭಟನೆ

ಗಜೇಂದ್ರಗಡ: ಕೊಪ್ಪಳ ಜಿಲ್ಲೆಯ ಗುಡದಳ್ಳಿ ಗ್ರಾಮದಲ್ಲಿಸವರ್ಣೀಯರಿಂದ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗಜೇಂದ್ರಗಡ ತಾಲೂಕು ಘಟಕ ಇತ್ತೀಚೆಗೆ ಇಲ್ಲಿನ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿತು.

Vijaya Karnataka 20 Mar 2020, 5:00 am
ಗಜೇಂದ್ರಗಡ: ಕೊಪ್ಪಳ ಜಿಲ್ಲೆಯ ಗುಡದಳ್ಳಿ ಗ್ರಾಮದಲ್ಲಿಸವರ್ಣೀಯರಿಂದ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗಜೇಂದ್ರಗಡ ತಾಲೂಕು ಘಟಕ ಇತ್ತೀಚೆಗೆ ಇಲ್ಲಿನ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿತು.
Vijaya Karnataka Web dasam protest protesting
ಹಲ್ಲೆಖಂಡಿಸಿ ದಸಂಸ ಪ್ರತಿಭಟನೆ


ಗಜೇಂದ್ರಗಡ ತಾಲೂಕು ಘಟಕದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಹನಮಂತ ಪೂಜಾರ ಮಾತನಾಡಿ, ರಾಜ್ಯದಲ್ಲಿದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಪದೆಪದೇ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಭಾವಚಿತ್ರವನ್ನು ಧ್ವಂಸಗೊಳಿಸಿದ ಕೊಪ್ಪಳ ಜಿಲ್ಲೆಯ ಗುಡದಳ್ಳಿ ಗ್ರಾಪಂ ಅಧ್ಯಕ್ಷ ಮತ್ತು ಅವರ ಕುಟುಂಬದವರು ದಲಿತ ಮಹಿಳೆಯರಿಗೆ ಜಾತಿ ನಿಂದನೆ ಮಾಡಿದ್ದಾರೆ. ಇಂತವರ ಮೇಲೆ ಸರಕಾರ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ದಲಿತರ ಮೇಲೆ ದೌರ್ಜನ್ಯ ಮಾಡಿದವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ನಂತರ ತಹಸೀಲ್ದಾರ್‌ ಜಿ.ಬಿ.ಜಕ್ಕನಗೌಡ್ರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಶಾಂತಗೇರಿ ಗ್ರಾಮ ಘಟಕದ ಅಧ್ಯಕ್ಷ ಮಲ್ಲೇಶ ಮೇಲಿನಮನಿ, ಶರಣು ಹಲಗಿ, ಮಲ್ಲಪ್ಪ ಮಾದರ, ಮಂಜುನಾಥ ನಡುವಿನಕೇರಿ, ಗಾದಲಿಂಗಪ್ಪ ಮಾದರ, ಸಾಂತಪ್ಪ ಹಟ್ಟಿಮನಿ ಇತರರು ಪ್ರತಿಭಟನೆಯಲ್ಲಿಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ