ಆ್ಯಪ್ನಗರ

ರೈತರಿಗೆ ಬಿತ್ತನೆ ಬೀಜ ವಿತರಣೆ

ಗಜೇಂದ್ರಗಡ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿಪ್ರಸಕ್ತ ವರ್ಷದ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ತಾಲೂಕಿನ ರೈತರಿಗೆ ಶಾಸಕ ಕಳಕಪ್ಪ ಬಂಡಿ ವಿತರಿಸಿದರು.

Vijaya Karnataka 19 May 2020, 5:00 am
ಗಜೇಂದ್ರಗಡ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿಪ್ರಸಕ್ತ ವರ್ಷದ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ತಾಲೂಕಿನ ರೈತರಿಗೆ ಶಾಸಕ ಕಳಕಪ್ಪ ಬಂಡಿ ವಿತರಿಸಿದರು.
Vijaya Karnataka Web distribution of sowing seed to farmers
ರೈತರಿಗೆ ಬಿತ್ತನೆ ಬೀಜ ವಿತರಣೆ


ನಂತರ ಮಾತನಾಡಿದ ಅವರು, ರೈತರಿಗೆ ತೊಂದರೆಯಾಗದಂತೆ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ರೈತ ಸಂಪರ್ಕ ಕೇಂದ್ರದಲ್ಲಿಸರಕಾರದ ಆದೇಶದಂತೆ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಂಗ್ರಹ ಮಾಡಿಕೊಳ್ಳಲಾಗಿದೆ ಎಂದರು.

ರೋಣ ತಾಲೂಕು ಸಹಾಯಕ ಕೃಷಿ ನಿರ್ದೇಶಕ ರವೀಂದ್ರಗೌಡ ಪಾಟೀಲ ಮಾತನಾಡಿ, ಮಿಶ್ರ ಕೃಷಿ ಪದ್ಧತಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನ ಸಾಲಿನಲ್ಲಿಅಂದಾಜು 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿಬಿತ್ತನೆ ಮಾಡುವ ಗುರಿ ಇಲಾಖೆಯು ಹೊಂದಿದೆ ಎಂದರು. ಹೊಳೆಆಲೂರು ಎಪಿಎಂಸಿ ಸದಸ್ಯ ಮುದಿಯಪ್ಪ ಕರಡಿ ಮಾತನಾಡಿದರು.

ಬಿಜೆಪಿ ನಗರ ಘಟಕ ಅಧ್ಯಕ್ಷ ಅಶೋಕ ವನ್ನಾಲ, ಪುರಸಭೆ ಸದಸ್ಯ ಯಮನೂರ ತಿರಕೋಜಿ, ನರೇಗಲ್‌ ಕೃಷಿ ಅಧಿಕಾರಿ ಜಗದೀಶ ಹಾದಿಮನಿ, ಸಹಾಯಕ ಕೃಷಿ ಅಧಿಕಾರಿ ಸಿ.ಕೆ.ಕಮ್ಮಾರ, ವೀರಣ್ಣ ಅಂಗಡಿ, ಮಹಾಂತೇಶ ಪೂಜಾರ, ಮುತ್ತಣ್ಣ ಕಡಗದ, ಬಾಳು ಗೌಡರ, ಮಲ್ಲುಮುದಿಯಪ್ಪನವರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ