ಆ್ಯಪ್ನಗರ

ಜಿಲ್ಲೆಯ ಸಮಗ್ರ ಅಭಿವೃದ್ಧಿ ಯೋಜನೆ ; ಸಚಿವ ಈಶ್ವರಪ್ಪ

ಗದಗ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಜನರ ಸಹಭಾಗಿತ್ವ ಹಾಗೂ ಅಭಿವೃದ್ಧಿ ಪರ ಚಿಂತನೆಗಳು ತಳ ಹಂತದಿಂದಲೇ ವಿಕೇಂದ್ರೀಕೃತ ಯೋಜನಾ ವರದಿ ಸಿದ್ಧಪಡಿಸಲು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ಸೂಚಿಸಿದರು.

Vijaya Karnataka 31 Jul 2020, 5:00 am
ಗದಗ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಜನರ ಸಹಭಾಗಿತ್ವ ಹಾಗೂ ಅಭಿವೃದ್ಧಿ ಪರ ಚಿಂತನೆಗಳು ತಳ ಹಂತದಿಂದಲೇ ವಿಕೇಂದ್ರೀಕೃತ ಯೋಜನಾ ವರದಿ ಸಿದ್ಧಪಡಿಸಲು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ಸೂಚಿಸಿದರು.
Vijaya Karnataka Web 30SALIM5_25
ಗದಗ ನಗರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿವಿಯಲ್ಲಿನಡೆದ ಸಭೆಯಲ್ಲಿಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿದರು.


ನಗರದ ಪಂಚಾಯತ್‌ ರಾಜ್‌ ವಿವಿ ಸಭಾಭವನದಲ್ಲಿನಡೆದ ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕರಡು ಯೋಜನೆ ಕುರಿತ ಚರ್ಚೆಯಲ್ಲಿಭಾಗವಹಿಸಿ ಅವರು ಮಾತನಾಡಿದರು.

ಸುಸ್ಥಿರ ಗ್ರಾಮೀಣ ಅಭಿವೃದ್ಧಿ ಗುರಿ ಗಮನದಲ್ಲಿಟ್ಟುಕೊಂಡು ಗ್ರಾಮೀಣ ಪ್ರದೇಶಗಳ ಜನರ ಜೀವನೋಪಾಯ, ಕೌಶಾಲ್ಯಾಭಿವೃದ್ಧಿ ಹಾಗೂ ಬಡತನ ನಿರ್ಮೂಲನೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಸ್ಥಳೀಯ ಪ್ರಾಕೃತಿಕ ಹಾಗೂ ಮಾನವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಪ್ರತಿ ಯೋಜನೆಗಳ ಅನುಷ್ಠಾನದಲ್ಲಿಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್‌ ಮಾತನಾಡಿ, ರಾಜ್ಯದ ಕೆಲ ಜಿಲ್ಲೆಯಲ್ಲಿಮಾತ್ರ ವಿಕೇಂದ್ರೀಕರಣ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿರಾಜ್ಯದ ಎಲ್ಲಜಿಲ್ಲೆಗಳಲ್ಲೂಪ್ರಾರಂಭಿಸಲಾಗುವುದು ಎಂದರು.

ಕರ್ನಾಟಕ ಪಂಚಾಯತ್‌ ರಾಜ್‌ ಪರಿಷತ್‌ ಉಪಾಧ್ಯಕ್ಷ ಡಿ.ಆರ್‌.ಪಾಟೀಲ್‌, ಕರ್ನಾಟಕ ಪಂಚಾಯತ್‌ ರಾಜ್‌ ಪರಿಷತ್‌ ಕಾರ್ಯಾಧ್ಯಕ್ಷ ಸಿ.ನಾರಾಯಣಸ್ವಾಮಿ, ಸಂಸದ ಶಿವಕುಮಾರ್‌ ಉದಾಸಿ ಮಾತನಾಡಿದರು.

ಜಿಪಂ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಶಾಸಕರಾದ ರಾಮಣ್ಣ ಲಮಾಣಿ, ಜಿಪಂ ಉಪಾಧ್ಯಕ್ಷೆ ಶೋಭಾ ಮೇಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್‌, ಸಿಇಒ ಡಾ.ಆನಂದ್‌ ಕೆ., ಜಿಪಂ ಉಪ ಕಾರ್ಯದರ್ಶಿ ಕಲ್ಲೇಶ್‌ ಇತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ