ಆ್ಯಪ್ನಗರ

ನಾಳೆ ವಿವಿಧ ಕಾಮಗಾರಿಗಳಿಗೆ ಚಾಲನೆ

ಗದಗ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಪಂ ಆಶ್ರಯದಲ್ಲಿಜ. 5ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಬಾಬು ಜಗಜೀವನರಾಂ ಭವನದ ಉದ್ಘಾಟನೆ ಹಾಗೂ ನಾನಾ ಕಾರ್ಯಕ್ರಮಗಳು ನಡೆಯಲಿವೆ.

Vijaya Karnataka 4 Jan 2020, 5:00 am
ಗದಗ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಪಂ ಆಶ್ರಯದಲ್ಲಿಜ. 5ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಬಾಬು ಜಗಜೀವನರಾಂ ಭವನದ ಉದ್ಘಾಟನೆ ಹಾಗೂ ನಾನಾ ಕಾರ್ಯಕ್ರಮಗಳು ನಡೆಯಲಿವೆ.
Vijaya Karnataka Web drive to different works tomorrow
ನಾಳೆ ವಿವಿಧ ಕಾಮಗಾರಿಗಳಿಗೆ ಚಾಲನೆ


ಹರಣಿಶಿಕಾರಿ ಸಮುದಾಯಗಳ 40 ಮನೆಗಳ ಉದ್ಘಾಟನೆ, ಪರಿಶಿಷ್ಟ ಜಾತಿ ಮೆಟ್ರಿಕ್‌ ನಂತರ ವೃತ್ತಿಪರ ಬಾಲಕಿಯರ ವಸತಿ ನಿಲಯ ಉದ್ಘಾಟನೆ, ಪರಿಶಿಷ್ಟ ವರ್ಗಗಳ ಮೆಟ್ರಿಕ್‌ ಬಾಲಕರ ವಸತಿ ನಿಲಯದ ಉದ್ಘಾಟನೆ, ಮುಳಗುಂದದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ ಉದ್ಘಾಟನೆ , ಗದಗ ತಾಲೂಕಿನ ವಸತಿ ನಿಲಯಗಳಲ್ಲಿರುವ ಕಂಪ್ಯೂಟರ್‌ ಲ್ಯಾಬ್‌ ಗಳು, ಅಭ್ಯಾಸ ಕೊಠಡಿಗಳ ಉದ್ಘಾಟನೆ ಮತ್ತು ನಿಲಯಗಳ ನವೀಕರಣ, ದುರಸ್ತಿ ಮತ್ತು ನೂತನ ಕೊಠಡಿಗಳ ಶಂಕುಸ್ಥಾಪನೆ ಜರುಗಲಿದೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸುವರು. ಸಚಿವ ಸಿ.ಸಿ.ಪಾಟೀಲ ಉಪಸ್ಥಿತಿಯಲ್ಲಿನಡೆಯಲಿದೆ. ಶಾಸಕ ಎಚ್‌.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.

ಜಿಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ , ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್‌ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ್‌, ಜಿಪಂ ಉಪಾಧ್ಯಕ್ಷ ಮಲ್ಲವ್ವ ಬಿಚ್ಚೂರ, ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ತಾಪಂ ಅಧ್ಯಕ್ಷ ಶರಣಬಸವನಗೌಡ ಪಾಟೀಲ, ತಾಪಂ ಉಪಾಧ್ಯಕ್ಷೆ ಸುಜಾತಾ ಖಂಡು, ತಾಪಂ ಸದಸ್ಯ ವಿದ್ಯಾಧರ ದೊಡ್ಡಮನಿ, ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಸಮಾಜ ಕಲ್ಯಾಣ ಇಲಾಖೆ ಸರಕಾರದ ಪ್ರಧಾನ ಕಾರ್ಯದರ್ಶಿ ಜಿ. ಕುಮಾರನಾಯ್‌್ಕ , ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಆರ್‌.ಎಸ್‌. ಪೆದ್ದಪ್ಪಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಸಂಗಪ್ಪ , ಕ.ವ.ಶಿ.ಸ. ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಟಿ. ರಾಘವೇಂದ್ರ, ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇಶಕ ಪರಶುರಾಮ ಶಿನ್ನಾಳಕರ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎ. ಹನುಮರಸಯ್ಯ, ಅಲೆಮಾರಿ ಅಭಿವೃದ್ಧಿ ಕೋಶದ ವಿಶೇಷಾಕಾರಿ ಶಿವಸ್ವಾಮಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ