ಆ್ಯಪ್ನಗರ

ಮನೆ ಮನೆಗೆ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ

ಗದಗ : ಕೇಂದ್ರದಲ್ಲಿ ಮೋದಿ ನೇತೃತ್ವದ ಸರಕಾರ ನೀಡುತ್ತಿರುವ ಪಾರದರ್ಶಕ ಆಡಳಿತ, ಜನಪರ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮೂಲಕ ದೇಶದ ಸುಭದ್ರತೆಗೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪಕ್ಷ ದ ಮುಖಂಡರು ಹಾಗೂ ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು ಎಂದು ವಿಪ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು.

Vijaya Karnataka 25 Feb 2019, 5:00 am
ಗದಗ : ಕೇಂದ್ರದಲ್ಲಿ ಮೋದಿ ನೇತೃತ್ವದ ಸರಕಾರ ನೀಡುತ್ತಿರುವ ಪಾರದರ್ಶಕ ಆಡಳಿತ, ಜನಪರ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮೂಲಕ ದೇಶದ ಸುಭದ್ರತೆಗೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪಕ್ಷ ದ ಮುಖಂಡರು ಹಾಗೂ ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು ಎಂದು ವಿಪ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು.
Vijaya Karnataka Web GDG-24SALIM25
ಗದಗ ನಗರದಲ್ಲಿ ಬಿಜೆಪಿ ಮುಖಂಡರು ಮನೆ ಮನೆಗೆ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಮನೆಯೊಂದಕ್ಕೆ ಬಿಜೆಪಿ ಪ್ರಚಾರ ಸ್ಟೀಕರ್‌ ಅಂಟಿಸಿದರು.


ಭಾನುವಾರ ನಗರದ ವಕೀಲ ಚಾಳದಲ್ಲಿರುವ ತಮ್ಮ ನಿವಾಸದ ಮಹಡಿ ಮೇಲೆ ಬಿಜೆಪಿ ಧ್ವಜ ಹಾರಿಸುವ ಮೂಲಕ ಮನೆ-ಮನೆಗೆ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ಪ್ರಜೆಯೂ ಲೋಕಸಭೆ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿಸುವ ಸಂಕಲ್ಪ ಹೊಂದಿದ್ದಾರೆ ಎಂದರು.

ಬಿಜೆಪಿ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಮನೆಯ ಮೇಲೆ ಬಿಜೆಪಿ ಧ್ವಜ ಹಾರಿಸಿ, ಗೋಡೆಗಳ ಮೇಲೆ ಪ್ರಧಾನಿ ಮೋದಿ ಅವರ ಭಾವಚಿತ್ರದ ಸ್ಟಿಕರ್‌ ಅಂಟಿಸಿಸಬೇಕು. ಜತೆಗೆ ಕೇಂದ್ರ ಸರಕಾರದ ಜನಪರ ಯೋಜನೆ, ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಬೇಕು ಎಂದರು.

ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಪತಿ ಉಡುಪಿ, ರಾಜು ಕುರಡಗಿ, ಶಹರ ಬಿಜೆಪಿ ಅಧ್ಯಕ್ಷ ಜಗನ್ನಾಥಸಾ ಭಾಂಡಗೆ, ಮಹೇಶ ಕೋಟಿ, ಜಯಶ್ರೀ ಉಗಲಾಟದ, ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ, ಅನಿಲ ಅಬ್ಬಿಗೇರಿ, ಜಯಶ್ರೀ ಭೈರವಾಡೆ, ಸತೀಶ ಮುದಗಲ್ಲ, ವಿನಾಯಕ ಹಬೀಬ ಅನೇಕರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ