ಆ್ಯಪ್ನಗರ

ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಲಕ್ಷ್ಮೇಶ್ವರ : ಸತತ ನಾಲ್ಕು ವರ್ಷಗಳಿಂದ ಬರಗಾಲ ಆವರಿಸಿದ್ದು ಬರ ಪರಿಸ್ಥಿತಿ ನೋಡಿ ಸುಮಾರು ಜನ ಗುಳೆ ಹೋಗಿದ್ದಾರೆ. ರಾಜ್ಯ ಸರಕಾರ ಗುಳೆ ಹೋಗುವುದನ್ನು ತಪ್ಪಿಸಲು ಸರಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದೆ. ಪ್ರತಿಯೊಬ್ಬರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಅಡರಕಟ್ಟಿ ಗ್ರಾಪಂ ಅಧ್ಯಕ್ಷ ಗಣೇಶ ತಿಪ್ಪಣ್ಣ ನಾಯಕ ಹೇಳಿದರು.

Vijaya Karnataka 10 Dec 2018, 5:00 am
ಲಕ್ಷ್ಮೇಶ್ವರ : ಸತತ ನಾಲ್ಕು ವರ್ಷಗಳಿಂದ ಬರಗಾಲ ಆವರಿಸಿದ್ದು ಬರ ಪರಿಸ್ಥಿತಿ ನೋಡಿ ಸುಮಾರು ಜನ ಗುಳೆ ಹೋಗಿದ್ದಾರೆ. ರಾಜ್ಯ ಸರಕಾರ ಗುಳೆ ಹೋಗುವುದನ್ನು ತಪ್ಪಿಸಲು ಸರಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದೆ. ಪ್ರತಿಯೊಬ್ಬರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಅಡರಕಟ್ಟಿ ಗ್ರಾಪಂ ಅಧ್ಯಕ್ಷ ಗಣೇಶ ತಿಪ್ಪಣ್ಣ ನಾಯಕ ಹೇಳಿದರು.
Vijaya Karnataka Web GDG-09LXR01
ಲಕ್ಷ್ಮೇಶ್ವರ ಸಮೀಪದ ಹರದಗಟ್ಟಿ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾಮಗಾರಿಗೆ ಅಡರಕಟ್ಟಿ ಗ್ರಾಪಂ ಅಧ್ಯಕ್ಷ ಗಣೇಶ ನಾಯಕ ಚಾಲನೆ ನೀಡಿದರು.


ಅಡರಕಟ್ಟಿ ಗ್ರಾಪಂ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೂಲಿ ಕಾರ್ಮಿಕರು ಬರ ಸ್ಥಿತಿ ನಿರ್ವಹಣೆ ಬಗ್ಗೆ ಚಿಂತಿಸುವ ಅವಶ್ಯಕತೆಯಿಲ್ಲ. ಬರ ನಿವಾರಣೆಗಾಗಿ ಸರಕಾರ ಎಲ್ಲ ರೀತಿಯ ಸವಲತ್ತು ನೀಡುತ್ತಿದ್ದು ಅದರಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಪ್ರಮುಖವಾಗಿದೆ. ಮಹಿಳೆಯರು, ಪುರುಷರು ಎಂಬ ಬೇಧವಿಲ್ಲದೆ ಎಲ್ಲರಿಗೂ ಸಮಾನ ವೇತನ ನೇರವಾಗಿ ದುಡಿದವರ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ