ಆ್ಯಪ್ನಗರ

ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ

ಗದಗ : ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು ಸ್ಥಳೀಯ ನ್ಯಾಯ ಬೆಲೆ ಅಂಗಡಿಗಳಲ್ಲಿ ತಮ್ಮ ಬೆರಳಚ್ಚುಗಳನ್ನು ನೀಡಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Vijaya Karnataka 5 Jun 2019, 5:00 am
ಗದಗ : ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು ಸ್ಥಳೀಯ ನ್ಯಾಯ ಬೆಲೆ ಅಂಗಡಿಗಳಲ್ಲಿ ತಮ್ಮ ಬೆರಳಚ್ಚುಗಳನ್ನು ನೀಡಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
Vijaya Karnataka Web e kycc at the fair price shop
ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ


ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆಯುತ್ತಿರುವ ಆದ್ಯತಾ ಮತ್ತು ಆದ್ಯತೇತರ ಪಡಿತರ ಚೀಟಿಗಳ ಫಲಾನುಭವಿಗಳ ಪೈಕಿ ನೈಜವಾದವರನ್ನು ಪತ್ತೆ ಹಚ್ಚುವ ಕಾರ್ಯಕೈಗೊಳ್ಳಲಾಗಿದೆ. ಈ ಯೋಜನೆಯಡಿ ಪಡಿತರ ಪಡೆಯುತ್ತಿರುವ ಕುಟುಂಬದ ಎಲ್ಲ ಸದಸ್ಯರು ಜೂ.1 ರಿಂದ ಅನ್ವಯವಾಗುವಂತೆ 2 ತಿಂಗಳಲ್ಲಿ ಸ್ಥಳೀಯ ನ್ಯಾಯ ಬೆಲೆ ಅಂಗಡಿಗಳಿಗೆ ತೆರಳಿ ಬೆರಳಚ್ಚು ( ಇ-ಕೆವೈಸಿ) ನೀಡುವಂತೆ ಸೂಚಿಸಿದ್ದಾರೆ.

ಆಧಾರ್‌ ಸಂಖ್ಯೆಯನ್ನು ಈಗಾಗಲೇ ಪಡಿತರ ಕಾರ್ಡ್‌ಗಳಿಗೆ ಜೋಡಣೆ ಮಾಡಲಾಗಿದೆ. ಇದರನ್ವಯ ಕುಟುಂಬದ ಎಲ್ಲರಿಗೂ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತಿದೆ. ಆದರೆ ಕುಟುಂಬದೊಂದಿಗೆ ವಾಸವಿಲ್ಲದ, ಮೃತಪಟ್ಟ ಮತ್ತು ಇನ್ನಿತರ ಸದಸ್ಯರಿಗೂ ಸಹ ಪಡಿತರ ಸರಬರಾಜಾಗುತ್ತಿದ್ದನ್ನು ಗಮನಿಸಲಾಗಿದೆ. ಈ ಕಾರಣಕ್ಕಾಗಿ ಸರಕಾರದ ಬೊಕ್ಕಸಕ್ಕೆ ಆಗುತ್ತಿರುವ ಹೊರೆ ತಪ್ಪಿಸಲು ಕುಟುಂಬದ ಪ್ರತಿ ಸದಸ್ಯರ ಬೆರಳಚ್ಚು ಪಡೆಯಲು ಈ ಕ್ರಮಕೈಗೊಳ್ಳಲಾಗಿದೆ. ಬೆರಳಚ್ಚು ನೀಡಿದ ಸದಸ್ಯರಿಗೆ ಮಾತ್ರ ಮುಂದಿನ ದಿನಗಳಲ್ಲಿ ಪಡಿತರ ವಿತರಣೆ ಮಾಡಲಾಗುತ್ತದೆ. ಎಸ್‌ಸಿ ಮತ್ತು ಎಸ್‌ಟಿ ವರ್ಗಕ್ಕೆ ಪಡಿತರ ಚೀಟಿದಾರರ ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗಿರುತ್ತದೆ. ವೃದ್ದರು, ಕುಷ್ಟರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್‌ ಪೀಡಿತರಿಗೆ ಇ-ಕೆವೈಸಿ (ಬೆರಳಚ್ಚು) ವಿನಾಯಿತಿ ನೀಡಲಾಗಿರುತ್ತದೆ. ಕೆವೈಸಿ ಕಾರ್ಯಕ್ಕೆ ನ್ಯಾಯಬೆಲೆ ಅಂಗಡಿಗಳಿಗೆ ಸರಕಾರದಿಂದ ಸೂಕ್ತ ಸಹಾಯ ಧನ ನೀಡಲಾಗುತ್ತದೆ.ಯಾವುದೇ ಕಾರ್ಡುದಾರರಿಂದ ಕೆವೈಸಿಗಾಗಿ ಹಣ ಪಡೆಯದಂತೆ ಸೂಚಿಸಲಾಗಿದೆ. ಪಡಿತರದಾರರು ನ್ಯಾಯ ಬೆಲೆ ಅಂಗಡಿಗಳಲ್ಲಿ ಹಣ ನೀಡದಂತೆ ಕೋರಲಾಗಿದೆ. ಒಂದು ವೇಳೆ ಹಣ ಪಡೆದ ಬಗ್ಗೆ ದೂರುಗಳೇನಾದರು ಬಂದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ