ಆ್ಯಪ್ನಗರ

ನೌಕರರ ಮುಂಬಡ್ತಿ :ಸ್ವಾಗತಾರ್ಹ

ಗದಗ: ರಾಜ್ಯ ಸರಕಾರಿ ಉದ್ಯೋಗದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲು ನೀಡುವ ಸರಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿರುವುದನ್ನು ಜಿಲ್ಲಾ ಕೆಎಸ್‌ಆರ್‌ಟಿಸಿ ಎಸ್‌ಸಿ, ಎಸ್‌ಟಿ ನೌಕರರ ಸಂಘ ಸ್ವಾಗತಿಸಿದೆ.

Vijaya Karnataka 11 May 2019, 5:00 am
ಗದಗ: ರಾಜ್ಯ ಸರಕಾರಿ ಉದ್ಯೋಗದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲು ನೀಡುವ ಸರಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿರುವುದನ್ನು ಜಿಲ್ಲಾ ಕೆಎಸ್‌ಆರ್‌ಟಿಸಿ ಎಸ್‌ಸಿ, ಎಸ್‌ಟಿ ನೌಕರರ ಸಂಘ ಸ್ವಾಗತಿಸಿದೆ.
Vijaya Karnataka Web employee upcoming welcome
ನೌಕರರ ಮುಂಬಡ್ತಿ :ಸ್ವಾಗತಾರ್ಹ


ಸುಪ್ರೀಂಕೋರ್ಟ್‌ನ ಈ ತೀರ್ಪಿನಿಂದಾಗಿ ಹಿಂಬಡ್ತಿಯ ಭೀತಿ ಎದುರಿಸುತ್ತಿದ್ದ ಸುಮಾರು 3,700 ಕ್ಕೂ ಹೆಚ್ಚು ಎಸ್ಸಿ-ಎಸ್ಟಿ ನೌಕರರು ತೂಗುಗತ್ತಿಯಿಂದ ಪಾರಾದಂತಾಗಿದೆ. ರಾಜ್ಯ ಸರಕಾರ ಜಾರಿ ಮಾಡಿದ್ದ ಕಾಯ್ದೆ ಪ್ರಶ್ನಿಸಿ ಬಿ.ಕೆ.ಪವಿತ್ರಾ ಸುಪ್ರೀಂಕೋರ್ಟ್‌ನದಲ್ಲಿ ಪ್ರಶ್ನೆ ಮಾಡಿದರು. ಸುಧೀರ್ಘ ದಿನಗಳವರೆಗೆ ವಾದ ವಿವಾದ ನಡೆಸಿ ಸುಪ್ರೀಂಕೋರ್ಟ್‌ ಈ ತೀರ್ಪು ನೀಡಿದ್ದು ಇದರಿಂದಾಗಿ ನೌಕರರಿಗೆ ಹರ್ಷವನ್ನುಂಟು ಮಾಡಿದಂತಾಗಿದೆ ಎಂದು ಜಿಲ್ಲಾ ಕೆಎಸ್‌ಆರ್‌ಟಿಸಿ ಎಸ್‌ಸಿ, ಎಸ್‌ಟಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ಸಿ.ಕೊಪ್ಪಳ, ಸಹ ಕಾರ್ಯದರ್ಶಿ ಬಿ.ನಾಗರಾಜ ತೀರ್ಪು ಸ್ವಾಗತಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ