ಆ್ಯಪ್ನಗರ

ಕೂಲಿಕಾರರಿಗೆ ಉದ್ಯೋಗ ಖಾತರಿ ವರದಾನ

ರೋಣ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸರಕಾರದ ದೂರದೃಷ್ಟಿಯ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಕೂಲಿ ಕಾರ್ಮಿಕರಿಗೆ ಆರ್ಥಿಕವಾಗಿ ಸಹಕಾರಿಯಾಗಿದೆ ಎಂದು ತಾಪಂ ಸದಸ್ಯ ಪ್ರಭು ಮೇಟಿ ಹೇಳಿದರು.

Vijaya Karnataka 14 Jun 2020, 5:00 am
ರೋಣ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸರಕಾರದ ದೂರದೃಷ್ಟಿಯ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಕೂಲಿ ಕಾರ್ಮಿಕರಿಗೆ ಆರ್ಥಿಕವಾಗಿ ಸಹಕಾರಿಯಾಗಿದೆ ಎಂದು ತಾಪಂ ಸದಸ್ಯ ಪ್ರಭು ಮೇಟಿ ಹೇಳಿದರು.
Vijaya Karnataka Web employment guarantee
ಕೂಲಿಕಾರರಿಗೆ ಉದ್ಯೋಗ ಖಾತರಿ ವರದಾನ


ಅವರು ತಾಲೂಕಿನ ಇಟಗಿ ಗ್ರಾಪಂ ವ್ಯಾಪ್ತಿಯಲ್ಲಿಗ್ರಾಮಗಳ ರೈತರ ಜಮೀನುಗಳಲ್ಲಿಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ನರೇಗಾ ಯೋಜನೆಯು ಗ್ರಾಮೀಣ ಪ್ರದೇಶದ ಜನರ ದುಡಿಯುವ ಕೈಗಳಿಗೆ ಉದ್ಯೊಗವನ್ನು ನೀಡುವ ವೈಶಿಷ್ಟ್ಯಪೂರ್ಣ ಯೋಜನೆಯಾಗಿದೆ. ಒಂದು ಆರ್ಥಿಕ ವರ್ಷದಲ್ಲಿಸ್ವ ಆಸಕ್ತಿಯಿಂದ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಕುಟುಂಬಕ್ಕೆ 100 ದಿನಗಳ ಕಾಲ ಉದ್ಯೋಗ ನೀಡಲಾಗುತ್ತದೆ ಎಂದರು.

ಗ್ರಾಪಂ ಪಿಡಿಒ ಮಂಜುನಾಥ ಜಾವೂರ ಮಾತನಾಡಿ, ನರೇಗಾ ಯೋಜನೆಯಲ್ಲಿಮಹಿಳೆ ಮತ್ತು ಪುರುಷರಿಗೂ ಸಮಾನವಾದ ಕೂಲಿ ನೀಡಲಾಗುತ್ತದೆ. ಶ್ರಮದ ಪ್ರತಿಫಲವನ್ನು ನೇರವಾಗಿ ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುತ್ತದೆ. ಯೋಜನೆ ಲಾಭವನ್ನು ಪಡೆಯಬೇಕು ಎಂದು ಮನವಿ ಮಾಡಿದರು

ಗ್ರಾಪಂ ಅಧ್ಯಕ್ಷೆ ಭೀಮವ್ವ ಜಡದೇಲಿ, ಉಪಾಧ್ಯಕ್ಷ ಪ್ರಕಾಶ ಜಾಲಾಪೂರ, ಶರಣಪ್ಪ ಮಳಗಿ,ಮಹಾಂತೇಶ ಕೊಮಾರ, ಹೂಗಾರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ