ಆ್ಯಪ್ನಗರ

ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಣೆ

ಕುರ್ತಕೋಟಿ : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ 100ದಿನಗಳ ಉದ್ಯೋಗ ಪಡೆಯುವ ಅವಕಾಶವಿದ್ದು. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಕುರ್ತಕೋಟಿ ಮತ್ತು ಹುಲಕೋಟಿ ಗ್ರಾಮದ ಸಹಾಯಕ ಕೃಷಿ ಅಧಿಕಾರಿ ಎಸ್‌.ಆರ್‌.ಬಿಸರಾಲ ಹೇಳಿದರು.

Vijaya Karnataka 12 May 2019, 5:00 am
ಕುರ್ತಕೋಟಿ : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ 100ದಿನಗಳ ಉದ್ಯೋಗ ಪಡೆಯುವ ಅವಕಾಶವಿದ್ದು. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಕುರ್ತಕೋಟಿ ಮತ್ತು ಹುಲಕೋಟಿ ಗ್ರಾಮದ ಸಹಾಯಕ ಕೃಷಿ ಅಧಿಕಾರಿ ಎಸ್‌.ಆರ್‌.ಬಿಸರಾಲ ಹೇಳಿದರು.
Vijaya Karnataka Web GDG-11MUL1
ಕುರ್ತಕೋಟಿ ಹಾಗೂ ಹೊಸಳ್ಳಿ ಗ್ರಾಮದ ಹೊಲದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 1100 ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವುದನ್ನು ಸಹಾಯಕ ಕೃಷಿ ಅಧಿಕಾರಿ ಎಸ್‌.ಆರ್‌.ಬಿಸರಾಲ ವೀಕ್ಷಿಸಿದರು.


ಕುರ್ತಕೋಟಿ ಮತ್ತು ಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭವಾದ ಉದ್ಯೋಗ ಖಾತರಿ ಯೋಜನೆ ವೀಕ್ಷಿಸಿ ಮಾತನಾಡಿದ ಅವರು, ಉದ್ಯೋಗ ಖಾತರಿ ಯೋಜನೆಯು ಕುರ್ತಕೋಟಿ ಮತ್ತು ಹೊಸಳ್ಳಿಯಲ್ಲಿ ಭರದಿಂದ ಸಾಗಿದ್ದು ದಿನಕ್ಕೆ ಸುಮಾರು 1100 ಜನ ಕೂಲಿ ಕಾರ್ಮಿಕರು ಬರುತ್ತಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಬರಗಾಲ ಆವರಿಸಿದಾಗ ಜನರು ಗುಳೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಸರಕಾರ ಇಂತಹ ಯೋಜನೆ ರೂಪಿಸಿದ್ದು ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಕೆಲಸ ನಿರ್ವಹಿಸಿದ ಪುರುಷ ಮತ್ತು ಮಹಿಳೆಯರಿಗೆ ದಿನಕ್ಕೆ 249 ರೂ.ಗಳನ್ನು 14 ದಿನಗಳ ಒಳಗೆ ಪಾವತಿ ಮಾಡಲಾಗುತ್ತದೆ. ಈ ಯೋಜನೆ ಬಹಳ ಉಪಯುಕ್ತವಾಗಿದ್ದು ಗ್ರಾಮೀಣ ಕುಟುಂಬಗಳ ರೈತರು ಪ್ರಯೋಜನ ಪಡೆಯಲು ಮುಂದಾಗಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ