ಆ್ಯಪ್ನಗರ

ಪ್ರತಿಯೊಬ್ಬರಿಗೂ ಆರೋಗ್ಯ ಕಾಳಜಿ ಬೇಕು

ಲಕ್ಷ್ಮೇಶ್ವರ: ಮನುಷ್ಯನಿಗೆ ಆರೋಗ್ಯ ಮುಖ್ಯವಾಗಿದ್ದು, ಆರೋಗ್ಯವೇ ಭಾಗ್ಯವಾಗಿದೆ. ಪ್ರತಿಯೊಬ್ಬರಿಗೂ ಆರೋಗ್ಯದ ಬಗ್ಗೆ ಕಾಳಜಿ ಇರಬೇಕು ಎಂದು ಬಿಜೆಪಿ ಜಿಲ್ಲಾಉಪಾಧ್ಯಕ್ಷ ಚಂಬಣ್ಣ ಬಾಳಿಕಾಯಿ ಹೇಳಿದರು.

Vijaya Karnataka 15 Dec 2019, 5:00 am
ಲಕ್ಷ್ಮೇಶ್ವರ: ಮನುಷ್ಯನಿಗೆ ಆರೋಗ್ಯ ಮುಖ್ಯವಾಗಿದ್ದು, ಆರೋಗ್ಯವೇ ಭಾಗ್ಯವಾಗಿದೆ. ಪ್ರತಿಯೊಬ್ಬರಿಗೂ ಆರೋಗ್ಯದ ಬಗ್ಗೆ ಕಾಳಜಿ ಇರಬೇಕು ಎಂದು ಬಿಜೆಪಿ ಜಿಲ್ಲಾಉಪಾಧ್ಯಕ್ಷ ಚಂಬಣ್ಣ ಬಾಳಿಕಾಯಿ ಹೇಳಿದರು.
Vijaya Karnataka Web everyone needs health care
ಪ್ರತಿಯೊಬ್ಬರಿಗೂ ಆರೋಗ್ಯ ಕಾಳಜಿ ಬೇಕು


ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿಶಾಸಕ ರಾಮಣ್ಣ ಲಮಾಣಿ ನೇತೃತ್ವ, ಸಹಯೋಗ ಹಾಗೂ ಸಪ್ತಗಿರಿ ಆಸ್ಪತ್ರೆ ಆಶ್ರಯದಲ್ಲಿಹಮ್ಮಿಕೊಳ್ಳಲಾಗಿದ್ದ ಉಚಿತ ಹೃದಯ ರೋಗ, ನರರೋಗ, ಮೂತ್ರಪಿಂಡ ಕಲ್ಲುತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮನುಷ್ಯ ತಮ್ಮ ದೈನಂದಿನ ಕೆಲಸದ ಒತ್ತಡ ಸೇರಿದಂತೆ ಅನೇಕ ಕಾರಣಗಳಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿಲ್ಲ. ಅದರಂತೆ ಇಂದಿನ ದುಬಾರಿ ವೈದ್ಯಕೀಯ ಚಿಕಿತ್ಸೆಯ ಕಾಲದಲ್ಲಿಬಡವರು ಆರೋಗ್ಯದ ಚಿಕಿತ್ಸೆ ಹಾಗೂ ತಪಾಸಣೆಗೆ ಹಿಂಜರಿಯುತ್ತಿದ್ದು, ಇದನ್ನು ಅರಿತ ಶಾಸಕ ರಾಮಣ್ಣ ಲಮಾಣಿ ಅವರು ಸಪ್ತಗಿರಿ ಆಸ್ಪತ್ರೆ ಆಶ್ರಯದಲ್ಲಿಉಚಿತ ಹೃದಯ ರೋಗ, ನರರೋಗ, ಮೂತ್ರಪಿಂಡ ಕಲ್ಲುತಪಾಸಣಾ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿರುವದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿತಾಲೂಕು ವೈದ್ಯಾಧಿಕಾರಿ ಡಾ.ಸುಭಾಷ ದಾಯಗೊಂಡ, ಆಡಳಿತ ವೈದ್ಯಾಧಿಕಾರಿ ಡಾ.ಗಿರೀಶ ಮರಡ್ಡಿ, ಸಪ್ತಗಿರಿ ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ.ಗೌರವ್‌, ನರರೋಗ ತಜ್ಞ ಡಾ.ಪ್ರಮೋದ, ಮೂತ್ರಪಿಂಡ ತಜ್ಞ ಡಾ.ಶಿವಂ, ಡಾ.ಚಂದ್ರು ಲಮಾಣಿ, ಡಾ.ಪ್ರಭಾಕರ ಶಿರಹಟ್ಟಿ, ಡಾ.ಗುರುರಾಜ, ಶಿವಯ್ಯ ಹಿರೇಮಠ, ಶಕುಂತಲಾ ನಾಗರೆಡ್ಡಿ, ವಿಜಯ ಕರಡಿ, ಬಿ.ಜೆ.ಪಿ ಮುಖಂಡರಾದ ನಿಂಗಪ್ಪ ಬನ್ನಿ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ಪ್ರವೀಣ ಬೊಮಲೆ, ತಾವರಪ್ಪ ಲಮಾಣಿ, ಸಿದ್ದು ದುರಗಣ್ಣವರ, ಬಸವರಾಜ ಚಕ್ರಸಾಲಿ, ಸಂಗಮೇಶ ಬೆಳವಲಕೊಪ್ಪ, ವಿಜಯ ಕುಂಬಾರ, ಛಾಯಪ್ಪ ಬಸಾಪುರ, ವೀರಯ್ಯ ಕಳ್ಳಿಮಠ ಸೇರಿದಂತೆ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ