ಗದಗ: ಗ್ರಾಮೀಣ ಕುಡಿಯುವ ನೀರಿನ ತುರ್ತು ಕಾಮಗಾರಿ, ಟಾಸ್ಕಪೋರ್ಸ್ ಕಾಮಗಾರಿ, ವಿದ್ಯುತ್ ಸಂಪರ್ಕಕ್ಕೆ ಬಿಡುಗಡೆಯಾದ ಅನುದಾನ ವಿನಿಯೋಗ ಕುರಿತು ಸರಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಥಮ ದರ್ಜೆ ಲೆಕ್ಕ ಸಹಾಯಕನನ್ನು ಜಿಪಂ ಸಿಇಒ ಎಸ್.ಬಿ.ಶೆಟ್ಟೆಣ್ಣವರ ಅಮಾನತು ಮಾಡಿದ್ದಾರೆ.
ಎಸ್.ಎ. ಖಂಡಪ್ಪಗೌಡ್ರ ಅವರೇ ಅಮಾನತುಗೊಂಡವರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ಸಿ. ಬಾಗಲಕೋಟ ಅವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಜಿಪಂ ಸಿಇಒ ಶಿಫಾರಸು ಮಾಡಿದ್ದಾರೆ.
ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಇಲಾಖೆಯಲ್ಲಿ ನಡೆದಿರುವ ಲೋಪದೋಷಗಳು ಜಿಪಂ ಸಿಇಒ ಗಮನಕ್ಕೆ ಬಂದಿವೆ. ಈ ಕೂಡಲೇ ಜಾರಿಗೆ ಬರುವಂತೆ ಖಂಡಪ್ಪಗೌಡ್ರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ 1957 ನಿಯಮ 10(3) ರಡಿ ಶಿಸ್ತಿನ ಕ್ರಮ ಅಗತ್ಯ ಎಂದು ಪರಿಗಣಿಸಿ ಅವರನ್ನು ಅಮಾನತುಗೊಳಿಸಿ ಸಿಇಒ ಆದೇಶ ಹೊರಡಿಸಿದ್ದಾರೆ.
ಎಸ್.ಎ. ಖಂಡಪ್ಪಗೌಡ್ರ ಅವರೇ ಅಮಾನತುಗೊಂಡವರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ಸಿ. ಬಾಗಲಕೋಟ ಅವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಜಿಪಂ ಸಿಇಒ ಶಿಫಾರಸು ಮಾಡಿದ್ದಾರೆ.
ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಇಲಾಖೆಯಲ್ಲಿ ನಡೆದಿರುವ ಲೋಪದೋಷಗಳು ಜಿಪಂ ಸಿಇಒ ಗಮನಕ್ಕೆ ಬಂದಿವೆ. ಈ ಕೂಡಲೇ ಜಾರಿಗೆ ಬರುವಂತೆ ಖಂಡಪ್ಪಗೌಡ್ರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ 1957 ನಿಯಮ 10(3) ರಡಿ ಶಿಸ್ತಿನ ಕ್ರಮ ಅಗತ್ಯ ಎಂದು ಪರಿಗಣಿಸಿ ಅವರನ್ನು ಅಮಾನತುಗೊಳಿಸಿ ಸಿಇಒ ಆದೇಶ ಹೊರಡಿಸಿದ್ದಾರೆ.