ಗದಗ: ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಬೆಳೆಗಳಾದ ಹೆಸರು, ಮುಸುಕಿನ ಜೋಳ, ಜೋಳ, ತೊಗರಿ, ಹತ್ತಿ, ಸಜ್ಜೆ, ಎಳ್ಳು, ಹುರುಳಿ ಹಾಗೂ ನವಣಿ ಬೆಳೆಗಳಿಗೆ ವಿಮಾಕಂತು ತುಂಬಲು ಜು.31 ಹಾಗೂ ಸೂರ್ಯಕಾಂತಿ ಬೆಳೆಗೆ ಅ.14ರಂದು ಕೊನೆ ದಿನವಾಗಿರುತ್ತದೆ. ರೈತ ಬಾಂಧವರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. ಬೆಳೆ ಸಾಲ ಪಡೆಯದ ರೈತರು ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ/ಖಾತೆ ಪುಸ್ತಕ/ ಕಂದಾಯ ರಸೀದಿಯನ್ನು ಸಂಬಂಧಿಸಿದ ಬ್ಯಾಂಕ್ ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೀಡಿ ಸಂರಕ್ಷ ಣೆ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ತಮ್ಮ ತಾಲೂಕಿಗೆ ಸಂಬಂಧಿಸಿದ ಗ್ರಾಪಂ ಮಟ್ಟದ ಬೆಳೆಗಳು ಹಾಗೂ ಹೋಬಳಿ ಮಟ್ಟದ ಬೆಳೆಗಳನ್ನು ಆಯ್ಕೆ ಮಾಡಿಕೊಂಡು ಅದು ಮಳೆ ಆಶ್ರಿತವೋ ಅಥವಾ ನೀರಾವರಿ ಬೆಳೆಯೋ ಎಂಬುದನ್ನು ನಿರ್ದಿಷ್ಟವಾಗಿ ನಮೂದಿಸಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ರೈತರು ಬೆಳೆವಿಮೆ ತುಂಬಲು ಕೊನೆಯ ದಿನಾಂಕಗಳಲ್ಲಿ ಜನದಟ್ಟಣಿಯಾಗುವ ಸಂಭವವಿದ್ದು, ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಬೆಳೆವಿಮೆ ತುಂಬಲು ತಿಳಿಸಲಾಗಿದೆ. ಜಿಲ್ಲೆಗೆ ಸಂಬಂಧಿಸಿದಂತೆ ಬಜಾಜ್ ಅಲಿಯಾಂಝ ಜನರಲ್ ಇನ್ಶೂರನ್ಸ್ಕಂಪನಿ ಲಿಮಿಟೆಡ್ ಮುಂಗಾರು ಹಂಗಾಮಿನ ಬೆಳೆ ವಿಮೆಯ ವಿಮಾ ಸಂಸ್ಥೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಬ್ಯಾಂಕ್ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳನ್ನು ಅಥವಾ ಸಂಬಂಧಿಸಿದ ವಿಮಾ ಸಂಸ್ಥೆಯ ಶಾಖೆ ಸಂಪರ್ಕಿಸಲು ಕೋರಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರ ಗಮನಕ್ಕೆ:ವಿಮಾಕಂತು ತುಂಬಲು ಜು.31, ಅ.14ಕೊನೆ ದಿನ
ಗದಗ: ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಬೆಳೆಗಳಾದ ಹೆಸರು, ಮುಸುಕಿನ ಜೋಳ, ಜೋಳ, ತೊಗರಿ, ಹತ್ತಿ, ಸಜ್ಜೆ, ಎಳ್ಳು, ಹುರುಳಿ ಹಾಗೂ ನವಣಿ ಬೆಳೆಗಳಿಗೆ ವಿಮಾಕಂತು ತುಂಬಲು ಜು.31 ಹಾಗೂ ಸೂರ್ಯಕಾಂತಿ ಬೆಳೆಗೆ ಅ.14ರಂದು ಕೊನೆ
Vijaya Karnataka 18 May 2019, 5:00 am