ಆ್ಯಪ್ನಗರ

1152ನೇ ದಿನಕ್ಕೆ ರೈತರ ಹೋರಾಟ

ನರಗುಂದ :ಆ.14ರಂದು ನ್ಯಾಯಾಧೀಕರಣ ತೀರ್ಪು ಹೊರ ಬಿದ್ದರೂ ಈವರೆಗೆ ರಾಜ್ಯ ಸರಕಾರ ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಯಾವುದೇ ಯೋಜನೆ ಕೈಗೊಂಡಿಲ್ಲ. ಈ ಕುರಿತು ಸರಕಾರಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸೆ.14 ರಂದು ನೀರಾವರಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ ಎಂದು ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ ತಿಳಿಸಿದರು.

Vijaya Karnataka 10 Sep 2018, 5:00 am
ನರಗುಂದ :ಆ.14ರಂದು ನ್ಯಾಯಾಧೀಕರಣ ತೀರ್ಪು ಹೊರ ಬಿದ್ದರೂ ಈವರೆಗೆ ರಾಜ್ಯ ಸರಕಾರ ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಯಾವುದೇ ಯೋಜನೆ ಕೈಗೊಂಡಿಲ್ಲ. ಈ ಕುರಿತು ಸರಕಾರಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸೆ.14 ರಂದು ನೀರಾವರಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ ಎಂದು ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ ತಿಳಿಸಿದರು.
Vijaya Karnataka Web farmers struggle for 1152th day
1152ನೇ ದಿನಕ್ಕೆ ರೈತರ ಹೋರಾಟ


ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಒತ್ತಾಯಿಸಿ ಭಾನುವಾರ ನಡೆದ 1152ನೇ ದಿನ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿ, ನ್ಯಾಯಾಧೀಕರಣ ತೀರ್ಪು ಕೊಟ್ಟರೂ ರಾಜ್ಯ ಸರಕಾರ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು ಸರ್ವ ಪಕ್ಷ ಸಭೆ ಕರೆದು ಚರ್ಚಿಸಲು ಮುಂದಾಗುತ್ತಿಲ್ಲ ಎಂದು ದೂರಿದರು.

ರೈತ ಹೋರಾಟಗಾರ ಎಸ್‌.ಬಿ.ಜೋಗಣ್ಣವರ ಮಾತನಾಡಿ, ಮಹದಾಯಿ ತೀರ್ಪು ಹೊರಬಿದ್ದು ತಿಂಗಳಾದರೂ ರಾಜ್ಯ ಸರಕಾರ ಮೌನವಹಿಸಿರುವುದನ್ನು ಪ್ರಶ್ನಿಸಿ ರೈತ ಸೇನಾ ಕರ್ನಾಟಕ ಅಧ್ಯಕ್ಷ ವೀರೇಶ ಸೊಬರದಮಠ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಅವರ ಮೂಲಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮಹದಾಯಿ ವಿಚಾರವಾಗಿ ಕೂಡಲೇ ಸಭೆ ಕೆರೆಯಬೇಕು ಎಂದು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸೆ.14 ರಂದು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದ ಅವರು, ಕೂಡಲೇ ಸರ್ವ ಪಕ್ಷ ಸಭೆ ಕರೆದು ಚರ್ಚಿಸಿ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು ಮುಂದಾಗಬೇಕು. ಇಲ್ಲದೆ ಹೋದರೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ