ಆ್ಯಪ್ನಗರ

ಸ್ಲಂ ಜನರನ್ನು ಕಡೆಗಣಿಸಿದರೆ ಉಗ್ರ ಹೋರಾಟ

ಗದಗ: ಕೇಂದ್ರ ಮತ್ತು ರಾಜ್ಯ ಸರಕಾರದಿಂದ ನಗರದಲ್ಲಿನಿರ್ಮಿಸುತ್ತಿರುವ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯ ಮನೆಗಳನ್ನು ಕೊಳಚೆ ಪ್ರದೇಶದ ಕುಟುಂಬಗಳಿಗೆ ನೀಡಬೇಕು. ವಸತಿ ಯೋಜನೆ ಕಲ್ಪಿಸುವಲ್ಲಿಸ್ಲಂ ಜನರನ್ನು ಕಡೆಗಣಿಸಿದರೆ ಜಿಲ್ಲಾಸ್ಲಂ ಸಮಿತಿಯಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಸಮಿತಿಯ ಅಧ್ಯಕ್ಷ ಇಮ್ತಿಯಾಜ ಮಾನ್ವಿ ಹೇಳಿದರು.

Vijaya Karnataka 15 Oct 2020, 5:00 am
ಗದಗ: ಕೇಂದ್ರ ಮತ್ತು ರಾಜ್ಯ ಸರಕಾರದಿಂದ ನಗರದಲ್ಲಿನಿರ್ಮಿಸುತ್ತಿರುವ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯ ಮನೆಗಳನ್ನು ಕೊಳಚೆ ಪ್ರದೇಶದ ಕುಟುಂಬಗಳಿಗೆ ನೀಡಬೇಕು. ವಸತಿ ಯೋಜನೆ ಕಲ್ಪಿಸುವಲ್ಲಿಸ್ಲಂ ಜನರನ್ನು ಕಡೆಗಣಿಸಿದರೆ ಜಿಲ್ಲಾಸ್ಲಂ ಸಮಿತಿಯಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಸಮಿತಿಯ ಅಧ್ಯಕ್ಷ ಇಮ್ತಿಯಾಜ ಮಾನ್ವಿ ಹೇಳಿದರು.
Vijaya Karnataka Web 14RUDRAGOUD1_25
ಗದಗ ಜಿಲ್ಲಾಸ್ಲಂ ಸಮಿತಿ ವತಿಯಿಂದ ನಡೆದ ಪದಾಧಿಕಾರಿಗಳ ಸಭೆಯಲ್ಲಿಸಮಿತಿ ಅಧ್ಯಕ್ಷ ಇಮ್ತಿಯಾಜ ಮಾನ್ವಿ ಮಾತನಾಡಿದರು.


ನಗರದ ಜಿಲ್ಲಾಸ್ಲಂ ಸಮಿತಿ ವತಿಯಿಂದ ನಡೆದ ಪದಾಧಿಕಾರಿಗಳ ಸಭೆಯಲ್ಲಿಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ಗದಗ-ಬೆಟಗೇರಿ ನಗರದ ವಸತಿರಹಿತರಿಗೆ ಹಾಗೂ ಗುಡಿಸಲು ನಿವಾಸಿಗಳಿಗೆ ವಸತಿ ಕಲ್ಪಿಸಲು ಆಗ್ರಹಿಸಿ ಸ್ಲಂ ಸಮಿತಿಯಿಂದ ಹೋರಾಟ ನಡೆಸಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮೂಲ ವಸತಿರಹಿತರಿಗೆ ಹಾಗೂ ಗುಡಿಸಲು ನಿವಾಸಿಗಳಿಗೆ ವಸತಿ ಕಲ್ಪಿಸಲು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಘೋಷಿತ ಹಾಗೂ ಅಘೋಷಿತ ಸ್ಲಂಗಳ ಸರ್ವೇ ನಡೆಸಿರುವುದನ್ನು ಪರಿಗಣಿಸಿ ಸೌಲಭ್ಯವಿಲ್ಲದೇ ಬದುಕು ನಡೆಸುತ್ತಿರುವ ಗುಡಿಸಲು ಕುಟುಂಬಗಳಿಗೆ ವಸತಿ ಯೋಜನೆ ಮಂಜೂರಿ ಮಾಡಬೇಕು. ಸುಮಾರು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತ ಬಂದಿರುವ ವಸತಿರಹಿತ ಕುಟುಂಬಗಳಿಗೆ ಮನೆಗಳನ್ನು ಹಂಚಿಕೆ ಮಾಡುವ ಕಾರ್ಯ ನಡೆಸಬೇಕೆಂದು ಒತ್ತಾಯಿಸಿದರು.

ಸ್ಲಂ ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ ಮಾತನಾಡಿ, ಹಲವಾರು ವರ್ಷಗಳಿಂದ ಸಂಘಟನೆ ಮೂಲಕ ಸ್ಲಂ ಪ್ರದೇಶದ ಕುಟುಂಬಗಳ ಸಮಸ್ಯೆ ಬಗ್ಗೆ ಹೋರಾಟ ನಡೆಸುತ್ತ ಬಂದಿದ್ದೇವೆ. ವಸತಿರಹಿತರ ಕುಟುಂಬಗಳ ಹೋರಾಟ ಮೂಲಕ ಎಚ್ಚೆತ್ತಗೊಂಡ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿಯಲ್ಲಿಸಾವಿರಾರು ಮನೆ ಮಂಜೂರಿ ಮಾಡಿ ಮನೆಗಳು ನಿರ್ಮಾಣ ಹಂತದಲ್ಲಿವೆ. ಮನೆ ಹಂಚಿಕೆಯ ಆಯ್ಕೆ ಪ್ರಕ್ರೀಯ ಸಂದರ್ಭದಲ್ಲಿನಿಜವಾದ ವಸತಿರಹಿತರ ಕುಟುಂಬ ಆಯ್ಕೆ ಮಾಡಬೇಕು. ಇಲ್ಲವಾದಲ್ಲಿಸ್ಲಂ ಸಮಿತಿಯಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದೆಂದು ಹೇಳಿದರು.

ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ ಮಾತನಾಡಿ, ಗದಗ-ಬೆಟಗೇರಿ ನಗರದ ವಿವಿಧ ಸ್ಲಂ ಪ್ರದೇಶಗಳ ನಿವಾಸಿಗಳ ಹೋರಾಟಕ್ಕೆ ಕೈ ಜೋಡಿಸಬೇಕೆಂದು ಹೇಳಿದರು.

ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೆಹರುನಿಸಾ ಢಾಲಾಯತ, ವಿಶಾಲಕ್ಷಿ ಹಿರೇಗೌಡ್ರ, ಭಾರತಿ ಬಗಾಡೆ, ನಜಮುನಿಸಾ ಮುರಗೋಡ, ಪುಷ್ಪಾ ಬಿಜಾಪೂರ, ಹಸೀನಾ ಕೊಪ್ಪಳ, ಮರ್ದಾನಬಿ ಬಳ್ಳಾರಿ, ವಿಕ್ರಮ.ಎಫ್‌.ಜಿ, ಜಾಫರ ಢಾಲಾಯತ, ಸಲೀಮ ಕದಡಿ, ಶರಣಪ್ಪ, ಚಾಂದಸಾಬ ಬದಾಮಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ