ಆ್ಯಪ್ನಗರ

ಗಣೇಶ ವಿಸರ್ಜನೆ ಮೆರವಣಿಗೆ: ಗುಂಪುಗಳ ನಡುವೆ ಮಾರಾಮಾರಿ

ಗಾಪೂರ ಪೇಟೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

Vijaya Karnataka Web 22 Sep 2018, 10:01 am
ಗದಗ: ಗಂಗಾಪೂರ ಪೇಟೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
Vijaya Karnataka Web 1


ಚಾಕು, ದೊಣ್ಣೆ, ಬಿಯರ್ ಬಾಟಲ್ ಗಳಿಂದ ಎರಡೂ ಗುಂಪುಗಳವರು ಹೊಡೆದಾಡಿಕೊಂಡಿದ್ದಾರೆ. ಮೂವರಿಗೆ ತಲೆ, ಹೊಟ್ಟೆ, ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.

ಚಂದ್ರು, ಸುರೇಶ್ ಹಾಗೂ ನಾಗರಾಜ್ ಎಂಬವರು ಗಂಭೀರ ಗಾಯ ಗೊಂಡಿದ್ದು, ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಮಾರಾಮಾರಿ ನಡೆದಿದೆ ಎನ್ನಲಾಗಿದೆ.

ರೌಡಿ ಶೀಟರ್ ಅರುಣ ಬೆಳಧಡಿ ಹಾಗೂ ಶ್ರೀರಾಮಸೇನೆಯ‌ ಜಿಲ್ಲಾ ಅಧ್ಯಕ್ಷ ರಾಜು ಖಾನಪ್ಪ ಅವರ ಕುಮಕ್ಕಿನಿಂದ ಮಾರಾಮಾರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ