ಆ್ಯಪ್ನಗರ

ಶಿಕ್ಷಣದೊಂದಿಗೆ ಆರೋಗ್ಯದತ್ತ ಗಮನ ಹರಿಸಿ

ಗದಗ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಆರೋಗ್ಯದ ಕಡೆ ಗಮನ ಹರಿಬೇಕು. ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕುರಿತು ಗ್ರಾಮದ ಜನರಿಗೆ ಅರಿವು ಮೂಡಿಸಬೇಕು ಎಂದು ರಡ್ಡೇರ ನಾಗನೂರ ಸ.ಹಿ.ಪ್ರಾಥಮಿಕ ಶಾಲೆ ಶಿಕ್ಷಕಿ ಕೆ.ಎಚ್‌ ದೊಡ್ಡಗೌಡರ ಹೇಳಿದರು.

Vijaya Karnataka 2 Oct 2019, 4:43 pm
ಗದಗ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಆರೋಗ್ಯದ ಕಡೆ ಗಮನ ಹರಿಬೇಕು. ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕುರಿತು ಗ್ರಾಮದ ಜನರಿಗೆ ಅರಿವು ಮೂಡಿಸಬೇಕು ಎಂದು ರಡ್ಡೇರ ನಾಗನೂರ ಸ.ಹಿ.ಪ್ರಾಥಮಿಕ ಶಾಲೆ ಶಿಕ್ಷಕಿ ಕೆ.ಎಚ್‌ ದೊಡ್ಡಗೌಡರ ಹೇಳಿದರು.
Vijaya Karnataka Web focus on health with education
ಶಿಕ್ಷಣದೊಂದಿಗೆ ಆರೋಗ್ಯದತ್ತ ಗಮನ ಹರಿಸಿ


ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದಲ್ಲಿವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿಗ್ರಾಮ ಸಂಪರ್ಕ ಯೋಜನೆಯಡಿ ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರಕಾರದ ಯೋಜನೆ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮದಲ್ಲಿಮಾತನಾಡಿದರು.

ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣೂರು ಬೀದಿ ನಾಟಕ ಮತ್ತು ಗಾನ ತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ಜಾನಪದ ಸಂಗೀತ ತಂಡದವರು ರಾಜ್ಯ ಸರಕಾರದ ಯೋಜನೆಗಳ ಕುರಿತು ಸ್ವಚ್ಛತೆ ಆರೋಗ್ಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ವಿ.ವಿ.ಹಿರೇಮಠ, ಎಸ್‌.ಆರ್‌ ಬನ್ನಿಗಿಡದ, ಜಿ.ಬಿ.ಪೂಜಾರ , ಎನ್‌.ವಿ ಗಂಗಾಪೂರ, ಸಿ.ವೈ. ಗುಡಸಲಮನಿ, ವಾರ್ತಾ ಇಲಾಖೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ