ಆ್ಯಪ್ನಗರ

ಬರಗಾಲ ನಿರ್ವಹಣೆಯಲ್ಲಿ ಸರಕಾರ ವಿಫಲ

ಗದಗ : ಕಳೆದ ಏಳು ವರ್ಷದಿಂದ ರಾಜ್ಯದಲ್ಲಿ ಭೀಕರ ಬರಗಾಲ ಸಂಭವಿಸಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರಕಾರ ವಿಪತ್ತು ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರದ ಮೇಲೆ ರೈತರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ರಾಜ್ಯ ರೈತ ಸಂಘದ ಗೌರವಧ್ಯಕ್ಷ ಚಾಮರಸ ಮಾಲಿಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka 15 Jun 2019, 5:00 am
ಗದಗ : ಕಳೆದ ಏಳು ವರ್ಷದಿಂದ ರಾಜ್ಯದಲ್ಲಿ ಭೀಕರ ಬರಗಾಲ ಸಂಭವಿಸಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರಕಾರ ವಿಪತ್ತು ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರದ ಮೇಲೆ ರೈತರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ರಾಜ್ಯ ರೈತ ಸಂಘದ ಗೌರವಧ್ಯಕ್ಷ ಚಾಮರಸ ಮಾಲಿಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
Vijaya Karnataka Web governments failure in drought management
ಬರಗಾಲ ನಿರ್ವಹಣೆಯಲ್ಲಿ ಸರಕಾರ ವಿಫಲ


ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬರ ನಿರ್ವಹಣೆ ಕುರಿತು ಸರಕಾರ ಚಿಂತನೆ ಮಾಡುವ ಬದಲು ಕುರ್ಚಿ ಉಳಿಸಿ ಕೊಳ್ಳಲು ಓಡಾಡುತ್ತಿದ್ದಾರೆ. ರೈತ ಸಂಘದಿಂದ ಕಳೆದ 36 ವರ್ಷಗಳಿಂದ ಹೋರಾಟ ಮಾಡುತ್ತಾ ಬರಲಾಗಿದೆ. ರೈತರಿಗೆ ಸಂಬಂಧಿಸಿದ ಹಲವಾರು ರೈತ ವಿರೋಧಿ ನೀತಿ ವಿರುದ್ಧ ಸಾಕಷ್ಟು ಹೋರಾಟ ಮಾಡಿದೆ. ರಾಜ್ಯದಲ್ಲಿ ಕಳೆದ ಸುಮಾರು ವರ್ಷಗಳಿಂದ ಸಾಕಷ್ಟು ಕೆರೆ ನಾನಾ ಕಾರಣಗಳಿಂದ ಒತ್ತುವಾರಿ ಮಾಡಲಾಗಿದೆ.ಕೆರೆಗಳ ನಿರ್ವಹಣೆ ಕುರಿತು ಚಿಂತನೆ ಮಾಡಲಾಗುತ್ತಿದೆ. ಕೆರೆಗಳ ಅಭಿವೃದ್ಧಿ ಮಾಡುವದರಿಂದ ರಾಜ್ಯದಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗುತ್ತಿದೆ ಎಂದರು.

ರಾಜ್ಯ ರೈತ ಸಂಘದ ರಾಜ್ಯಧ್ಯಕ್ಷ ಪಡಗಲಪುರ ನಾಗೇಂದ್ರ ಮಾತನಾಡಿ, ಅರಣ್ಯದಲ್ಲಿ ಗಣಿಗಾರಿಕೆ, ನದಿಯಲ್ಲಿ ಮರಳುಗಾರಿಕೆಯಿಂದ ಅಂತರ್ಜಲ ಮಟ್ಟ ಏರಿಕೆಯಾಗುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಶೇ.85ರಷ್ಟು ಹಿಂಗಾರು ವಿಫಲವಾಗಿದೆ. ಬರ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ. ಸಂಘಟನೆ ಮೂಲಕ ಬರ ಪರಿಶೀಲಿಸಿ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಜು.21ರಂದು ನರಗುಂದ ಬಂಡಾಯ, ರೈತ ಹುತಾತ್ಮ ದಿನಾಚತಣೆ ಅಂಗವಾಗಿ ಬರಮುಕ್ತ ಕರ್ನಾಟಕ ಸಂಕಲ್ಪ ಘೋಷಣೆ ಮಾಡಿ ರಾಜ್ಯಾದ್ಯಂತ ಬರ ನಿರ್ವಹಣೆಯಲ್ಲಿ ಶ್ರಮಿಸಲಾಗುವುದು. ಶೀಘ್ರದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲಾಗುವುದು ಎಂದರು.

ರಾಮಸ್ವಾಮಿ ಜಿ.ಟಿ., ಎಂ.ರಾಮ, ಗೋಪಾಲ, ಸೂಗುರಯ್ಯ ಆರ್‌.ಎಸ್‌.ಮಠ, ಮಹಾದೇವಗೌಡ ಪಾಟೀಲ, ಕೆ.ಜಿ.ಶಾಂತಸ್ವಾಮಿಮಠ, ಮುತ್ತನಗೌಡ ಚೌಡರಡ್ಡಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ