ಆ್ಯಪ್ನಗರ

ಹೆಸರು ಖರೀದಿ ಕೇಂದ್ರಕ್ಕೆ ಹಸಿರು ನಿಶಾನೆ

​ಗದಗ: ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿಗೆ ಕೇಂದ್ರ ಸರಕಾರ ಹಸಿರು ನಿಶಾನೆ ಕೊಟ್ಟಿದ್ದು, ರಾಜ್ಯದ ಪ್ರಮುಖ ಮಾರುಕಟ್ಟೆಗಳಿಂದ 12,224 ಮೆಟ್ರಿಕ್‌ ಟನ್‌ ಹೆಸರು ಖರೀದಿಗೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಹಾ ಮಂಡಳಿ ಆದೇಶಿಸಿದೆ.

Vijaya Karnataka 28 Sep 2019, 5:00 am
ಸಲೀಮ್‌ ಬಳಬಟ್ಟಿ
Vijaya Karnataka Web green to the name purchase center
ಹೆಸರು ಖರೀದಿ ಕೇಂದ್ರಕ್ಕೆ ಹಸಿರು ನಿಶಾನೆ

ಗದಗ: ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿಗೆ ಕೇಂದ್ರ ಸರಕಾರ ಹಸಿರು ನಿಶಾನೆ ಕೊಟ್ಟಿದ್ದು, ರಾಜ್ಯದ ಪ್ರಮುಖ ಮಾರುಕಟ್ಟೆಗಳಿಂದ 12,224 ಮೆಟ್ರಿಕ್‌ ಟನ್‌ ಹೆಸರು ಖರೀದಿಗೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಹಾ ಮಂಡಳಿ ಆದೇಶಿಸಿದೆ.

2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿಕೇಂದ್ರ ಸರಕಾರ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ (ನ್ಯಾಯಸಮ್ಮತ ನಿಖರ ಗುಣಮಟ್ಟ) ಹೆಸರನ್ನು 7050 ರೂ.ಗಳಂತೆ ಗದಗ, ಧಾರವಾಡ, ಕಲಬುರಗಿ, ಬೆಳಗಾವಿ, ಬಾಗಲಕೋಟ, ಯಾದಗಿರಿ ಮತ್ತು ಬೀದರ ಜಿಲ್ಲೆಗಳ ರೈತರಿಂದ ಖರೀದಿಸಲು ಮಹಾಮಂಡಳಿ ಮುಂದಾಗಿದೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಮಹಾಮಂಡಳಿಯು 2.49 ಲಕ್ಷ ಹೆಕ್ಟೇರ್‌ ಪ್ರದೇಶದಿಂದ 48,905 ಮೆಟ್ರಿಕ್‌ ಟನ್‌ ಹೆಸರು ಉತ್ಪಾದನೆ ನಿರೀಕ್ಷಿಸಿತ್ತು. ಆದರೆ ಮಾರುಕಟ್ಟೆಗೆ ಆವಕವಾಗುತ್ತಿರುವ ಹೆಸರಿನ ಪ್ರಮಾಣ ಕಡಿಮೆಯಾಗಿರುವುದು ಮತ್ತು ಪ್ರತಿ ಟನ್‌ಗೆ 4200 ರೂ. ದಿಂದ 6850 ರೂ. ವರೆಗೆ ಹೆಸರು ಖರೀದಿಯಾಗುತ್ತಿರುವುದನ್ನು ಗಮನಿಸಿ ಮಹಾಮಂಡಳಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿಕೇಂದ್ರ ಸರಕಾರ ಪ್ರತಿ ಕ್ವಿಂಟಲ್‌ಗೆ ಎಫ್‌ಎಕ್ಯೂ ಗುಣಮಟ್ಟದ ಹೆಸರನ್ನು 7050 ರೂ.ಗಳಂತೆ ಒಟ್ಟು ರಾಜ್ಯದಿಂದ ಗರಿಷ್ಠ 12,226 ಮೆಟ್ರಿಕ್‌ ಟನ್‌ ಹೆಸರು ಖರೀದಿಗೆ ಆದೇಶಿಸಿದೆ.

ಟಾಸ್ಕ್‌ಫೋರ್ಸ್‌ ಸಮಿತಿಗೆ ಸೂಚನೆ
ಹೆಸರು ಖರೀದಿ ಕೇಂದ್ರ ತೆರೆಯಲು ಆಯ್ಕೆ ಹಾಗೂ ಜಿಲ್ಲಾವಾರು ಉತ್ಪಾದನಾ ಆಧಾರ, ರೈತರ ನೋಂದಣಿ ಆಧಾರದ ಮೇಲೆ ಖರೀದಿ ಕೇಂದ್ರಗಳ ಸಂಖ್ಯೆಯನ್ನು ನಿಗದಿಪಡಿಸಲು ಟಾಸ್ಕ್‌ಫೋರ್ಸ್‌ ಸಮಿತಿಗೆ ಸೂಚನೆ ನೀಡಲಾಗಿದೆ. ಹೆಸರು ಖರೀದಿ ಆದೇಶ ಹೊರಡಿಸಿದ 15 ದಿನಗಳಲ್ಲಿನೋಂದಣಿ ಕಾರ್ಯ ಮತ್ತು 30 ದಿನದಲ್ಲಿಖರೀದಿ ಪೂರ್ಣಗೊಳ್ಳಬೇಕು. ಪ್ರತಿ ಎಕರೆಗೆ 4 ಕ್ವಿಂಟಲ್‌ ಗರಿಷ್ಠ ಅಥವಾ ಪ್ರತಿ ರೈತನಿಂದ 4 ಕ್ವಿಂಟಲ್‌ ಮಾತ್ರ ಖರೀದಿಸಬೇಕು.

ಪಹಣಿ ಕಡ್ಡಾಯ
ಖರೀದಿ ಕೇಂದ್ರದಲ್ಲಿಹೆಸರು ಖರೀದಿಸುವ ಮುನ್ನ ಪಹಣಿ ಪತ್ರವನ್ನು ಕಡ್ಡಾಯವಾಗಿ ಸಂಬಂಧಿಸಿದವರಿಂದ ಪಡೆಯಬೇಕು. ಪಹಣಿ ಪರಿಶೀಲಿಸಿ ಹೆಸರು ಬೆಳೆದಿರುವ ಕುರಿತು ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಪಹಣಿಯಲ್ಲಿರುವ ರೈತರ ಹೆಸರಿನ ಆಧಾರದ ಮೇಲೆ ಆಧಾರ್‌ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್‌ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯ ಜಮಾ ಮಾಡುವಂತೆ ಸರಕಾರದ ಅಧೀನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮ
ಖರೀದಿ ಕೇಂದ್ರಗಳಲ್ಲಿರೈತರ ಹೆಸರಿನಲ್ಲಿವರ್ತಕರು ತರುವ ಹೆಸರುಕಾಳು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತ ನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು ಹಾಗೂ ಖರೀದಿ ಪ್ರಗತಿಯ ವಿವರವನ್ನು ಪ್ರತಿದಿನ ಸರಕಾರ ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಸಲ್ಲಿಸಬೇಕು ಎಂದು ಸರಕಾರದ ಅಧೀನ ಕಾರ್ಯದರ್ಶಿ ಬಿ.ಎಸ್‌. ಮಂಜುನಾಥ ಬುಧವಾರ ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ