ಆ್ಯಪ್ನಗರ

ಗುಳೆ ತಡೆಗೆ ಖಾತ್ರಿ ಯೋಜನೆ ಸಹಕಾರಿ

ರೋಣ : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮದ ಹಾಗೂ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಜನರು ಉದ್ಯೋಗ ಅರಸಿ ಗುಳೆ ಹೋಗದಂತೆ ತಡೆಯಲು ಬರಗಾಲ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ರಾಪಂ ಪಿಡಿಒ ರಷಿದ್‌ ಯಲಿಗಾರ ಹೇಳಿದರು.

Vijaya Karnataka 27 May 2019, 5:00 am
ರೋಣ : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮದ ಹಾಗೂ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಜನರು ಉದ್ಯೋಗ ಅರಸಿ ಗುಳೆ ಹೋಗದಂತೆ ತಡೆಯಲು ಬರಗಾಲ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ರಾಪಂ ಪಿಡಿಒ ರಷಿದ್‌ ಯಲಿಗಾರ ಹೇಳಿದರು.
Vijaya Karnataka Web GDG-26 RON 6
ತಾಲೂಕಿನ ಹಿರೇಮಣ್ಣೂರ ಗ್ರಾಮದಲ್ಲಿ ನರೇಗಾ ಕಾಮಗಾರಿಗೆ ಗ್ರಾಪಂ ಪಿಡಿಒ ರಷಿದ್‌ ಯಲಿಗಾರ ಚಾಲನೆ ನೀಡಿದರು.


ತಾಲೂಕಿನ ಚಿಕ್ಕಮಣ್ಣೂರ ಗ್ರಾಪಂ ವ್ಯಾಪ್ತಿಯ ಹಿರೇಮಣ್ಣೂರ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಲಪ್ರಭಾ ಬಲದಂಡೆ ಕಾಲುವೆಯ ಹೂಳೆತ್ತುವ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು

ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆ ಸೇರಿ ಹಲವಾರು ಯೋಜನೆಗಳು ಗ್ರಾಪಂಗೆ ಬಂದಿವೆ. ಅವುಗಳ ಮಾರ್ಗಸೂಚಿಯಂತೆ ಜನರಿಗೆ ಉದ್ಯೋಗ ನೀಡಲಾಗುತ್ತಿದೆ. ಸರಕಾರ ಹೆಣ್ಣು ಗಂಡು ಎಂಬ ಬೇಧಭಾವ ಮಾಡದೇ ಸಮಾನ ವೇತನ ನೀಡುತ್ತಿದೆ. ಬೇಸಿಗೆ ಕಾಲದಲ್ಲಿ ರೈತರ ಹೊಲಗಳಿಗೆ ಬದುವು, ಕೆರೆ ನಿರ್ಮಾಣ, ಒಳಗಟ್ಟಿ, ಚೆಕ್‌ ಡ್ಯಾಂ, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವಾರು ಯೋಜನೆಗಳಿವೆ. ಈ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಂಡರೆ ದುಡಿಯುವ ಕೈಗಳಿಗೂ ಉದ್ಯೋಗ ದೊರಕಲಿದ್ದು, ಅಭಿವೃದ್ಧಿಯೂ ಸಾಧ್ಯವಾಗಲಿದೆ. ಗ್ರಾಮದಲ್ಲಿ ಈಗಾಗಲೇ 150ಕ್ಕೂ ಅಧಿಕ ಕೃಷಿ ಕಾರ್ಮಿಕರು, ಕೂಲಿ ಕಾರ್ಮಿಕರು ಪಾಲ್ಗೊಂಡು ಈ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗ್ರಾಪಂ ಉಪಾಧ್ಯಕ್ಷ ಬಸವರಾಜ ಬನಹಟ್ಟಿ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳಿಂದ ಬರಗಾಲ ಆವರಿಸಿದ್ದು, ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿತ್ತು. ಆದರೆ, ಗ್ರಾಪಂ ಅನುದಾನದಲ್ಲಿ ಗ್ರಾಮಸ್ಥರು ನಿರುದ್ಯೋಗಿಗಳಾಗಬಾರದು ಎಂದು ಕೇಂದ್ರ ಸರಕಾರ ಜಾರಿ ತಂದಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಬಡ ಜನರಿಗೆ, ವಿಶೇಷವಾಗಿ ಕೃಷಿ ಕೂಲಿ ಕಾರ್ಮಿಕರಿಗೆ ಬಹು ದೊಡ್ಡ ವರದಾನವಾಗಿದೆ ಎಂದರು.

ಗ್ರಾಪಂ ಸದಸ್ಯರಾದ ರಂಗನಾಥ ಕವಾಸ್ತ, ಈರವ್ವ ಓಲೇಕಾರ, ಯಲ್ಲವ್ವ ಮಾದರ, ಗೌಡಪ್ಪ ಹುಲ್ಲೂರ, ತಿಪ್ಪಣ್ಣ ಕುರಿಯವರ, ಮುತ್ತಪ್ಪ ಸೂಡಿ ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ