ಆ್ಯಪ್ನಗರ

ಇಂದು ಹಡಪದ ಅಪ್ಪಣ್ಣ ಜಯಂತಿ

ಗದಗ : ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಜು. 15ರಂದು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ 2441ನೇ ಶಿವಾನುಭವದಲ್ಲಿ ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಅಂಗವಾಗಿ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

Vijaya Karnataka 15 Jul 2019, 5:00 am
ಗದಗ : ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಜು. 15ರಂದು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ 2441ನೇ ಶಿವಾನುಭವದಲ್ಲಿ ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಅಂಗವಾಗಿ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
Vijaya Karnataka Web hadapad appanna jayanti today
ಇಂದು ಹಡಪದ ಅಪ್ಪಣ್ಣ ಜಯಂತಿ


ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಮಹಾಶರಣ ಹಡಪದ ಅಪ್ಪಣ್ಣನವರ ವಚನಸಾರ ಕುರಿತು ಗದುಗಿನ ಮುನಸಿಪಲ್‌ ಕಾಲೇಜಿನ ಪ್ರಾಧ್ಯಾಪಕಿ ಜಯಶ್ರೀ ಬಸವರಾಜ ಪಟ್ಟಣಶೆಟ್ಟಿ ಉಪನ್ಯಾಸ ನೀಡುವರು.

ಗದಗ ಜಿಲ್ಲಾ ಬಣಜಿಗ ಸಮಾಜಕ್ಕೆ ನೂತನವಾಗಿ ಅಧ್ಯಕ್ಷ ರಾಗಿ ಆಯ್ಕೆಯಾದ ಈಶ್ವರಪ್ಪ ಚಂದ್ರಶೇಖರಪ್ಪ ಮುನವಳ್ಳಿ ಹಾಗೂ ಗದಗ ತಾಲೂಕು ಬಣಜಿಗ ಸಮಾಜದ ಅಧ್ಯಕ್ಷ ನಾಗಪ್ಪ ವೀರಪ್ಪ ಸವಡಿ ಅವರನ್ನು ಸನ್ಮಾನಿಸಲಾಗುವುದು. ಡಂಬಳದ ಬಸವರಾಜ ಸಿದ್ಧಣ್ಣವರ ಅವರಿಂದ ವಚನ ಸಂಗೀತ ಕಾರ್ಯಕ್ರಮ ಜರುಗಲಿದೆ. ಧರ್ಮಗ್ರಂಥ ಪಠಣವನ್ನು ಸಹನಾ ಬಸಪ್ಪ ಶಲವಡಿ ಹಾಗೂ ವಚನ ಚಿಂತನವನ್ನು ಭೂದೇವಿ ಕುರ್ತಕೋಟಿ ನೆರವೇರಿಸುವರು.

ದಾಸೋಹ ಸೇವೆಯನ್ನು ಸಿದ್ಧಲಿಂಗೇಶ್ವರ ಅಂಗಡಿ ಸಹೋದರರು ವಹಿಸಿಕೊಂಡಿದ್ದಾರೆಂದು ಸಂಘದ ಅಧ್ಯಕ್ಷ ಎಂ.ಸಿ.ಐಲಿ,ಶಿವಾನುಭವ ಸಮಿತಿ ಚೇರ್ಮನ್‌ ವಿವೇಕಾನಂದಗೌಡ ಪಾಟೀಲ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ