ಆ್ಯಪ್ನಗರ

ಅರೆಬೆತ್ತಲೆ ಪಾದಯಾತ್ರೆ ಪ್ರತಿಭಟನೆ ಸಧ್ಯಕ್ಕಿಲ್ಲ

ಗದಗ: ಸರಕಾರದಿಂದ ದಲಿತರಿಗೆ ಮಂಜೂರಾದ ಭೂಮಿಯನ್ನು ಮೇಲ್ವರ್ಗದವರು ತಮ್ಮ ಹೆಸರಿಗೆ ನೋಂದಾಯಿಸಿಕೊಂಡಿದ್ದಾರೆ. ಇದನ್ನು ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಸೆ. 25ರಂದು ಅರೆಬೆತ್ತಲೆ ಪಾದಯಾತ್ರೆ ಹಮ್ಮಿಕೊಂಡಿತ್ತು. ಆದರೆ ಜಿಲ್ಲಾಧಿಕಾರಿಗಳು ಮನವಿಗೆ ಸ್ಪಂದಿಸಿ ಕಾಲಾವಕಾಶ ಕೋರಿದ್ದಾರೆ. ಹೀಗಾಗಿ

Vijaya Karnataka 25 Sep 2019, 5:00 am
ಗದಗ: ಸರಕಾರದಿಂದ ದಲಿತರಿಗೆ ಮಂಜೂರಾದ ಭೂಮಿಯನ್ನು ಮೇಲ್ವರ್ಗದವರು ತಮ್ಮ ಹೆಸರಿಗೆ ನೋಂದಾಯಿಸಿಕೊಂಡಿದ್ದಾರೆ. ಇದನ್ನು ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಸೆ. 25ರಂದು ಅರೆಬೆತ್ತಲೆ ಪಾದಯಾತ್ರೆ ಹಮ್ಮಿಕೊಂಡಿತ್ತು. ಆದರೆ ಜಿಲ್ಲಾಧಿಕಾರಿಗಳು ಮನವಿಗೆ ಸ್ಪಂದಿಸಿ ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂದೆ ಪಡೆಯಲಾಗಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೋಳಿ ತಿಳಿಸಿದರು.
Vijaya Karnataka Web 24SALIM26_25
ಗದಗನಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿಚಂದ್ರಕಾಂತ ಕಾದ್ರೋಳಿ ಮಾತನಾಡಿದರು.


ಮಂಗಳವಾರ ನಗರದ ಪತ್ರಿಕಾ ಭವನದಲ್ಲಿನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ದಲಿತರಿಗೆ ಅನ್ಯಾಯ ಆಗಿರುವ ವಿಷಯ ಮತ್ತು ಹೋರಾಟ ನಡೆಸುವ ನಿರ್ಧಾರವನ್ನು ಜಿಲ್ಲಾಧಿಕಾರಿಗೆ ತಿಳಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಸೆ. 21ರಂದು ಸಭೆ ನಡೆಸಿ, ದಲಿತರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿಹೋರಾಟ ಮುಂದೂಡಲಾಗಿದೆ ಎಂದರು.

ಭೂಮಿ ಪರಭಾರೆ ವಿಷಯ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಸಭೆ ಕರೆದ ದಿನದಂದೆ ಉಪವಿಭಾಗಾಧಿಕಾರಿ ನೇತೃತ್ವದಲ್ಲಿಒಂದು ಸಮಿತಿ ರಚನೆ ಮಾಡಿದ್ದಾರೆ. ಆ ಮೂಲಕ ತಿಂಗಳ ಒಳಗಾಗಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದರು. ಮಾರ್ತಾಂಡಪ್ಪ ಹಾದಿಮನಿ, ತಿರುಕಪ್ಪ ಚಿಕ್ಕೇರಿ, ಮರಿಯಪ್ಪ ಪೂಜಾರ, ನಾಗೇಶ ಹರಿಜನ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ