ಆ್ಯಪ್ನಗರ

ಬಿಜೆಪಿಯಿಂದ ಕುದುರೆ ವ್ಯಾಪಾರ: ಎಚ್‌.ಕೆ. ಪಾಟೀಲ

ಗದಗ: ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಕುದುರೆ ವ್ಯಾಪಾರವೇ ಕಾರಣ. ಬಿಜೆಪಿಯವರ ಕುದುರೆ ವ್ಯಾಪಾರ ಯಶಸ್ವಿಯಾಗುವುದಿಲ್ಲ ಎಂದು ಶಾಸಕ ಎಚ್‌.ಕೆ. ಪಾಟೀಲ ಹೇಳಿದರು.

Vijaya Karnataka 12 Jul 2019, 5:00 am
ಗದಗ: ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಕುದುರೆ ವ್ಯಾಪಾರವೇ ಕಾರಣ. ಬಿಜೆಪಿಯವರ ಕುದುರೆ ವ್ಯಾಪಾರ ಯಶಸ್ವಿಯಾಗುವುದಿಲ್ಲ ಎಂದು ಶಾಸಕ ಎಚ್‌.ಕೆ. ಪಾಟೀಲ ಹೇಳಿದರು.
Vijaya Karnataka Web horse trading from bjp hk the bottle
ಬಿಜೆಪಿಯಿಂದ ಕುದುರೆ ವ್ಯಾಪಾರ: ಎಚ್‌.ಕೆ. ಪಾಟೀಲ


ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನಮ್ಮ ಪಕ್ಷದ ಶಾಸಕ ಡಾ. ಸುಧಾಕರ ಅವರನ್ನು ಹೇಗೆ ಹಿಡಿದುಕೊಂಡು ಹೋಗಲು ಬಂದಿದ್ದರು ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ. ಅಲ್ಲದೇ ಅತೃಪ್ತ ಶಾಸಕರ ಬೇಡಿಕೆಗಳು, ಅವರ ನಡೆಯನ್ನು ಜನ ಕಂಡಿದ್ದಾರೆ. ಜನ ಮುಗ್ಧರಿರಬಹುದು. ಆದರೆ ದಡ್ಡರಲ್ಲ ಎನ್ನುವುದನ್ನು ಅತೃಪ್ತ ಶಾಸಕರು ಮರೆಯಬಾರದು'' ಎಂದು ಎಚ್ಚರಿಸಿದರು.

''ಜಿಂದಾಲ್‌ ಕಂಪನಿಗೆ ಭೂಮಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯಾವುದೇ ನಿರ್ಧಾರ ಆಗಿಲ್ಲ. ಇದನ್ನು ಸ್ವತಃ ಎಂ.ಬಿ. ಪಾಟೀಲ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ತಪ್ಪು ಮಾಹಿತಿ ಹರಿದಾಡುತ್ತಿದೆ'' ಎಂದು ಎಚ್‌.ಕೆ. ಪಾಟೀಲ್‌ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ