ಆ್ಯಪ್ನಗರ

ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯ ಮೂಡಿಸಿ

ಗದಗ : ಬಾಲ್ಯದಲ್ಲಿಯೇ ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಸೇವಾ ಭಾವನೆ ಜೊತೆಗೆ ಶ್ರದ್ಧೆಯಿಂದ ಓದುವುದನ್ನು ಕಲಿಸಿದಾಗ ಮಕ್ಕಳು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಗದಗ ಗ್ರಾಮೀಣ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಹೇಳಿದರು.

Vijaya Karnataka 6 Jan 2019, 5:00 am
ಗದಗ : ಬಾಲ್ಯದಲ್ಲಿಯೇ ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಸೇವಾ ಭಾವನೆ ಜೊತೆಗೆ ಶ್ರದ್ಧೆಯಿಂದ ಓದುವುದನ್ನು ಕಲಿಸಿದಾಗ ಮಕ್ಕಳು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಗದಗ ಗ್ರಾಮೀಣ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಹೇಳಿದರು.
Vijaya Karnataka Web GDG-5SALIM6
ಗದಗ ತಾಲೂಕಿನ ಅಂತೂರ ಬೆಂತೂರ ಗ್ರಾಮದ ಪ್ರೌಢಶಾಲೆಯಲ್ಲಿ ನಡೆದ ಎನ್‌ಎಸ್‌ಎಸ್‌ ಘಟಕವನ್ನು ಗಣ್ಯರು ಉದ್ಘಾಟಿಸಿದರು.


ಅಂತೂರು ಬೆಂತೂರ ಗ್ರಾಮದ ಕೃ.ವೆಂ. ಪಾಟೀಲ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಕಾಶಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷ ನಿಂಗಪ್ಪ ಅಮಾಗಿ ಆಗಮಿಸಿದ್ದರು. ಶಿಕ್ಷಕಿ ಆರ್‌.ಎಸ್‌. ಜಾಲರಡ್ಡಿ ಸ್ವಾಗತಿಸಿದರು. ಆರ್‌.ಡಿ.ಜೋಶಿ, ಎಸ್‌.ಪಿ. ಪ್ರಭಯ್ಯನಮಠ ಮಾತನಾಡಿದರು. ವಿ.ಕೆ. ಆದವಾಣಿ ವಂದಿಸಿದರು. ಜಯಶ್ರೀ ಬಿನ್ನಾಳ ನಿರೂಪಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಭಾರತ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾದ ಜಯಶ್ರೀ ಕುಂದರಗಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ