ಆ್ಯಪ್ನಗರ

ಸಾಹಿತ್ಯಲೋಕಕ್ಕೆ ತುಂಬಲಾರದ ನಷ್ಟ

ಗದಗ: ತಾಲೂಕಿನ ಹುಲಕೋಟಿ ಸಹಕಾರಿ ಶಿಕ್ಷ ಣ ಸಂಸ್ಥೆಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ದಿ.ಗಿರೀಶ ಕಾರ್ನಾಡ್‌ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

Vijaya Karnataka 11 Jun 2019, 5:00 am
ಗದಗ: ತಾಲೂಕಿನ ಹುಲಕೋಟಿ ಸಹಕಾರಿ ಶಿಕ್ಷ ಣ ಸಂಸ್ಥೆಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ದಿ.ಗಿರೀಶ ಕಾರ್ನಾಡ್‌ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
Vijaya Karnataka Web infinite loss to literature
ಸಾಹಿತ್ಯಲೋಕಕ್ಕೆ ತುಂಬಲಾರದ ನಷ್ಟ


ಕನ್ನಡ ಉಪನ್ಯಾಸಕ ಬಿ.ಬಿ.ಪಾಟೀಲ ಅವರು ಜೀವನ ಚರಿತ್ರೆ, ಸಾಹಿತ್ಯ ಕುರಿತು ಮಾತನಾಡಿದರು. ಪ್ರಾಚಾರ್ಯ ಡಿ.ಜಿ.ಜೋಗಣ್ಣವರ ಮಾತನಾಡಿ, ಗಿರೀಶ ಕಾರ್ನಾಡ್‌ರವರ ಅಗಲಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದ್ದು ಅವರ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ಕೊಡಲಿ ಎಂದರು. ಶ್ರದ್ಧಾಂಜಲಿ ಸಭೆಯಲ್ಲಿ ಕಾಲೇಜಿನ ಉಪನ್ಯಾಸಕರು, ಕಚೇರಿಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಎರಡು ನಿಮಿಷ ಮೌನ ಆಚರಿಸಲಾಯಿತು. ಇತಿಹಾಸ ಉಪನ್ಯಾಸಕ ಆರ್‌.ಎಸ್‌.ಹೆಬಸೂರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ