ಆ್ಯಪ್ನಗರ

ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

ಹೊಳೆಆಲೂರು : ಇಲ್ಲಿಗೆ ಸಮೀಪದ ಗುಳಗುಂದಿ, ಮೆಣಸಗಿ, ಗಾಡಗೋಳಿ, ಹೊಳೆಮಣ್ಣೂರು ಹಾಗೂ ಕುರುವಿನಕೊಪ್ಪ, ಹೊಳೆಆಲೂರು ನದಿ ಪಾತ್ರದ ಗ್ರಾಮಗಳಿಗೆ ಬುಧವಾರ ಶಾಸಕ ಸಿ.ಸಿ.ಪಾಟೀಲ ಹಾಗೂ ಜಿಲ್ಲಾಡಳಿತ, ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಗ್ರಾಮದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದರು.

Vijaya Karnataka 8 Aug 2019, 5:00 am
ಹೊಳೆಆಲೂರು : ಇಲ್ಲಿಗೆ ಸಮೀಪದ ಗುಳಗುಂದಿ, ಮೆಣಸಗಿ, ಗಾಡಗೋಳಿ, ಹೊಳೆಮಣ್ಣೂರು ಹಾಗೂ ಕುರುವಿನಕೊಪ್ಪ, ಹೊಳೆಆಲೂರು ನದಿ ಪಾತ್ರದ ಗ್ರಾಮಗಳಿಗೆ ಬುಧವಾರ ಶಾಸಕ ಸಿ.ಸಿ.ಪಾಟೀಲ ಹಾಗೂ ಜಿಲ್ಲಾಡಳಿತ, ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಗ್ರಾಮದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದರು.
Vijaya Karnataka Web HLR1.
ಹೊಳೆಆಲೂರು ಗ್ರಾಮದಲ್ಲಿ ಯಾಂತ್ರಿಕೃತ ದೋಣಿಯನ್ನು ಇರಿಸಲಾಗಿದೆ.


ಶಾಸಕ ಸಿ.ಸಿ.ಪಾಟೀಲ ಮಾತನಾಡಿ,ನಿರಂತೆ ಸುರಿಯುತ್ತಿರುವ ಮಳೆಯಿಂದ ಮಲಪ್ರಭಾ ನದಿ ತುಂಬಿ ಹರಿಯುತ್ತಿದ್ದು ನವಿಲು ತೀರ್ಥ ಜಲಾಶಯವು ತುಂಬಿರುವುದರಿಂದ ಹೆಚ್ಚುವರಿ ನೀರನ್ನು ಬಿಡಲಾಗಿದೆ. ಒಳಹರಿವು ಹೆಚ್ಚಾಗಿರುವುದರಿಂದ 70 ಸಾವಿರ ಕ್ಯೂಸೆಕ್‌ ನೀರು ಬಿಡುವ ಸಾಧ್ಯತೆ ಇದೆ. ಅದಕ್ಕಾಗಿ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಎರಡು ತುಕಡಿ ನೇಮಿಸುವಂತೆ ಸರಕಾರಕ್ಕೆ ಮನವಿ ಮಾಡಲಾಗಿದೆ. ಜನರಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಗಂಜಿ ಕೇಂದ್ರ ತೆರೆಯಲಾಗಿದೆ.

ಅವಶ್ಯಕತೆ ಬಿದ್ದಲ್ಲಿ ಇನ್ನು ಹೆಚ್ಚು ಗಂಜಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ, ಜಿಲ್ಲಾಡಳಿತವು ಪ್ರವಾಹ ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಜನರು ಬೇಗನೇ ಸುರಕ್ಷಿತ ಸ್ಥಳಗಳತ್ತ ತೆರಳಬೇಕು ಎಂದರು.

ಜಿಪಂ ಮಾಜಿ ಅಧ್ಯಕ್ಷ ನಿಂಗಪ್ಪ ಕೆಂಗಾರ, ಜಿಪಂ ಮುಖ್ಯಕಾರ್ಯದರ್ಶಿ ಮಂಜುನಾಥ ಚೌಹ್ವಾಣ, ತಹಸೀಲ್ದಾರ ಶರಣಮ್ಮ ಕಾರಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ