ಆ್ಯಪ್ನಗರ

ನೀರಾವರಿ ಕಾಮಗಾರಿ ಕಳಪೆ, ಆರೋಪ

ಮುಂಡರಗಿ: ತಾಲೂಕಿನ ವಿವಿಧ ಭಾಗಗಳಲ್ಲಿಹಾಗೂ ನಾಲ್ಕು ಹಂತಗಳಲ್ಲಿಕೈಗೊಂಡಿರುವ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಯು ಟೆಂಡರ್‌ ಪ್ರಕಾರ ನಡೆಯದೇ ತೀರಾ ಕಳಪೆಯಾಗಿದ್ದು, ಸಮರ್ಪಕವಾಗಿ ನಿರ್ವಹಣೆ ಮಾಡದ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಗುತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಹೋರಾಟಗಾರ ವೈ.ಎನ್‌.ಗೌಡರ ಒತ್ತಾಯಿಸಿದರು.

Vijaya Karnataka 16 Dec 2019, 5:00 am
ಮುಂಡರಗಿ: ತಾಲೂಕಿನ ವಿವಿಧ ಭಾಗಗಳಲ್ಲಿಹಾಗೂ ನಾಲ್ಕು ಹಂತಗಳಲ್ಲಿಕೈಗೊಂಡಿರುವ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಯು ಟೆಂಡರ್‌ ಪ್ರಕಾರ ನಡೆಯದೇ ತೀರಾ ಕಳಪೆಯಾಗಿದ್ದು, ಸಮರ್ಪಕವಾಗಿ ನಿರ್ವಹಣೆ ಮಾಡದ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಗುತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಹೋರಾಟಗಾರ ವೈ.ಎನ್‌.ಗೌಡರ ಒತ್ತಾಯಿಸಿದರು.
Vijaya Karnataka Web irrigation works poor charged
ನೀರಾವರಿ ಕಾಮಗಾರಿ ಕಳಪೆ, ಆರೋಪ


ಪಟ್ಟಣದಲ್ಲಿಭಾನುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ರೈತರ ಜಮೀನುಗಳಲ್ಲಿಹನಿ ನೀರಾವರಿ ಯೋಜನೆಯ ಕಾಮಗಾರಿ ಕೈಗೊಳ್ಳುವ ಪೂರ್ವದಲ್ಲಿಅಧಿಕಾರಿಗಳು ರೈತರ ಸಭೆ ಕರೆಯದೇ ಮನಬಂದಂತೆ ಕಾಮಗಾರಿ ಕೈಗೊಂಡಿದ್ದಾರೆ. ಇದರಿಂದಾಗಿ ರೈತರ ಬೆಳೆ ಹಾನಿಯ ಜತೆಗೆ ಜಮೀನು ಹಾಳಾಗಿದೆ. ಕಾಮಗಾರಿಗೆ ಕಳಪೆ ಗುಣಮಟ್ಟದ ಸಾಮಗ್ರಿ ಬಳಸಲಾಗಿದೆ ಎಂದು ಆರೋಪಿಸಿದರು.

ರೈತರ ಜಮೀನಿನ ಬದುವುಗಳಲ್ಲಿಹನಿ ನೀರಾವರಿ ಯೋಜನೆಯ ಕಾಮಗಾರಿ ಕೈಗೊಳ್ಳಬೇಕು ಎಂಬ ನಿಯಮವಿದೆ. ಆದರೆ ಗುತ್ತಿಗೆದಾರರು ಜಮೀನುಗಳ ಮಧ್ಯದಲ್ಲಿಕಾಮಗಾರಿ ಕೈಗೊಂಡಿದ್ದಾರೆ. ಇದರಿಂದಾಗಿ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದರು.

ಕಾಮಗಾರಿಯಲ್ಲಿಅವ್ಯವಹಾರ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಈ ಹಿಂದಿನ ಮೈತ್ರಿ ಸರಕಾರ ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದರು. ಅವರ ಬೆಂಬಲದಿಂದಾಗಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಮನ ಬಂದಂತೆ ಕಾಮಗಾರಿ ಮಾಡುತ್ತಿದ್ದಾರೆ ಎಂದು ದೂರಿದರು.

ಮುಂಡರಗಿ, ಕೊಪ್ಪಳ, ಗದಗ, ಯಲಬುರ್ಗಾ ಮೊದಲಾದ ಭಾಗಗಳಲ್ಲಿಹನಿ ನೀರಾವರಿ ಯೋಜನೆಯ ಕಾಮಗಾರಿ ಕೈಗೊಳ್ಳಲಾಗಿದ್ದು, ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಸರಕಾರ ತಕ್ಷಣ ಈ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು. ಇಲ್ಲದಿದ್ದರೆ ಈ ಭಾಗದ ರೈತರೊಂದಿಗೆ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ