ಆ್ಯಪ್ನಗರ

ಪಪಂ,ಪಜಾ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ

ಗದಗ: ಪ್ರಸಕ್ತ ಸಾಲಿಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ 800 ಹಾಸಿಗೆಯುಳ್ಳ ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿಕನಿಷ್ಟ ಶೇ. 75ರಷ್ಟು ಹುದ್ದೆಗಳನ್ನು ಮೀಸಲಿರಿಸುವ ಭರವಸೆಯ ನಿಟ್ಟಿನಲ್ಲಿಉದ್ಯೋಗ ಮೇಳ ಆಯೋಜಿಸಲಾಗಿದೆ. ( 3 ರಿಂದ 6 ತಿಂಗಳು )

Vijaya Karnataka 26 Sep 2019, 5:00 am
ಗದಗ: ಪ್ರಸಕ್ತ ಸಾಲಿಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ 800 ಹಾಸಿಗೆಯುಳ್ಳ ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿಕನಿಷ್ಟ ಶೇ. 75ರಷ್ಟು ಹುದ್ದೆಗಳನ್ನು ಮೀಸಲಿರಿಸುವ ಭರವಸೆಯ ನಿಟ್ಟಿನಲ್ಲಿಉದ್ಯೋಗ ಮೇಳ ಆಯೋಜಿಸಲಾಗಿದೆ. ( 3 ರಿಂದ 6 ತಿಂಗಳು ) ಉಚಿತವಾಗಿ ತರಬೇತಿ ನೀಡಲಾಗುವುದು.
Vijaya Karnataka Web job fair for sc st candidates
ಪಪಂ,ಪಜಾ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ


ಜಿಲ್ಲೆಯ ಅಭ್ಯರ್ಥಿಗಳು ಸೆ.30 ರಂದು ಬೆಳಗ್ಗೆ 10ಕ್ಕೆ ನಗರದ ಕೆ.ಎಚ್‌.ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿ ತರಬೇತಿ ಮೇಳದಲ್ಲಿಹಾಜರಿರಬೇಕು. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ದಾಖಲೆಗಳು ( ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ ) , ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ರಹವಾಸಿ, 2 ಫೋಟೊ, ಬ್ಯಾಂಕ್‌ ಪಾಸ್‌ ಬುಕ್‌ ಝೆರಾಕ್ಸ್‌, ಅನುಭವ ಪ್ರಮಾಣ ಪತ್ರ ಈ ದಾಖಲಾತಿಗಳೊಂದಿಗೆ ಸೆ.30 ರಂದು ಬೆಳಗ್ಗೆ 10ಕ್ಕೆ ನಗರದ ಕೆ.ಎಚ್‌.ಪಾಟೀಲ ಕ್ರೀಡಾಂಗಣದಲ್ಲಿಭಾಗವಹಿಸಬೇಕು. ಮೇಳದಲ್ಲಿಅಪೋಲ್‌ ಲಿಮಿಟೆಡ್‌, ರಾಮಯ್ಯ ಮೆಮೋರಿಯಲ್‌ ಆಸ್ಪತ್ರೆ ಹಾಗೂ ನಾರಾಯಣ ಆಸ್ಪತ್ರೆಯ ಪ್ರತಿನಿಧಿಗಳು ಮೇಳದಲ್ಲಿಭಾಗವಹಿಸಿ ಮಾಹಿತಿ ಒದಗಿಸುತ್ತಾರೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ 3 ಆಸ್ಪತ್ರೆಗಳಲ್ಲಿ3 ರಿಂದ 6 ತಿಂಗಳವರೆಗೆ ಉಚಿತ ತರಬೇತಿ ನೀಡಲಾಗುವುದು.

ಮೇಳದಲ್ಲಿಎಸ್‌ಎಸ್‌ಎಲ್‌ಸಿ, ಪಿಯುಸಿ ಪದವಿ ಹಾಗೂ ಇನ್ನಿತರ ವಿದ್ಯಾರ್ಹತೆ ಹೊಂದಿದ 18 ರಿಂದ 35 ವಯಸ್ಸು ವಯೋಮಿತಿಯಲ್ಲಿರುವ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿತಿಳಿಸಿದ್ದಾರೆ. ಮಾಹಿತಿಗಾಗಿ ದೂ. 08372-233996 ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ