ಆ್ಯಪ್ನಗರ

ಕೊಣ್ಣೂರ: ಬಿಜೆಪಿ ವಿಜಯೋತ್ಸವ

ಕೊಣ್ಣೂರ : ಬಾಗಲಕೋಟ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡ್ರ ಅವರ ಗೆಲುವು ಕೊಣ್ಣೂರ ಭಾಗದ ಬಿಜೆಪಿ ಕಾರ್ಯಕರ್ತರ ಹರ್ಷವನ್ನು ಇಮ್ಮಡಿಗೊಳಿಸಿದೆ.

Vijaya Karnataka 24 May 2019, 5:00 am
ಕೊಣ್ಣೂರ : ಬಾಗಲಕೋಟ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡ್ರ ಅವರ ಗೆಲುವು ಕೊಣ್ಣೂರ ಭಾಗದ ಬಿಜೆಪಿ ಕಾರ್ಯಕರ್ತರ ಹರ್ಷವನ್ನು ಇಮ್ಮಡಿಗೊಳಿಸಿದೆ.
Vijaya Karnataka Web GDG-23KNR PHOTO 1B
ಕೊಣ್ಣೂರ ಸಮೀಪದ ಶಿರೋಳದಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು.


ಕೊಣ್ಣೂರ ಸಮೀೕಪದ ಖಾನಾಪೂರ, ಗಂಗಾಪೂರ, ರ.ನಾಗನೂರ, ಗುಳಗಂದಿ, ಕರಕಿಕಟ್ಟಿ, ಭೋಪಳಾಪೂರ, ಮೇಣಸಗಿ, ಕಪ್ಪಲಿ, ಬೂದಿಹಾಳ, ಬೇಳ್ಳೇರಿ, ವಾಸನ, ಲಕಮಾಪೂರ ಹಾಗೂ ಶಿರೋಳಗಳಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೊಣ್ಣೂರಿನ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಶಿರೋಳ ಹಾಗೂ ಸುತ್ತಮುತ್ತಲಿನ ಬಿಜೆಪಿ ಕಾರ್ಯಕರ್ತರು ಬಸ್‌ ನಿಲ್ಧಾಣ ಹತ್ತಿರ ಪರಸ್ಪರ ಬಣ್ಣ ಹಚ್ಚಿಕೊಂಡು ಹಾಗೂ ಪಟಾಕಿ ಸಿಡಿಸಿ ನಂತರ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಶಿರೋಳದ ಪ್ರಮುಖ ಬೀದಿಗಳಲ್ಲಿ ಕಾರ್ಯಕರ್ತರು ಸಾಯಂಕಾಲ ಡಿಜೆ ಸೌಂಡ್‌ ಸಿಸ್ಟಮ್‌ನೊಂದಿಗೆ ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ