ಆ್ಯಪ್ನಗರ

ಮಕ್ಕಳ ಮೇಲೆ ಹೆಚ್ಚಿನ ನಿಗಾ ಇರಲಿ

ಗದಗ : ಮಕ್ಕಳ ಮೇಲೆ ನಡೆಯುವ ಲೈಂಗಿಕ ಕಿರುಕುಳವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಮಕ್ಕಳ ಭವ್ಯ ಭವಿಷ್ಯದ ಹಿತ ದೃಷ್ಠಿಯಿಂದ ಅತ್ಯಂತ ಸೂಕ್ಷ ್ಮವಾಗಿ ಪರಿಹಾರದ ಮಾರ್ಗ ಕಂಡುಕೊಳ್ಳಬೇಕಿದೆ ಎಂದು ಐಎಂಎ ಅಧ್ಯಕ್ಷ ಡಾ.ಧನೇಶ ದೇಸಾಯಿ ಅಭಿಪ್ರಾಯಪಟ್ಟರು.

Vijaya Karnataka 24 Aug 2019, 5:00 am
ಗದಗ : ಮಕ್ಕಳ ಮೇಲೆ ನಡೆಯುವ ಲೈಂಗಿಕ ಕಿರುಕುಳವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಮಕ್ಕಳ ಭವ್ಯ ಭವಿಷ್ಯದ ಹಿತ ದೃಷ್ಠಿಯಿಂದ ಅತ್ಯಂತ ಸೂಕ್ಷ ್ಮವಾಗಿ ಪರಿಹಾರದ ಮಾರ್ಗ ಕಂಡುಕೊಳ್ಳಬೇಕಿದೆ ಎಂದು ಐಎಂಎ ಅಧ್ಯಕ್ಷ ಡಾ.ಧನೇಶ ದೇಸಾಯಿ ಅಭಿಪ್ರಾಯಪಟ್ಟರು.
Vijaya Karnataka Web GDG-23RUDRAGOUD14
ಗದಗ ಐಎಂಎ ಸಭಾಂಗಣದಲ್ಲಿ ನಡೆದ ವಿಚಾರ ಗೋಷ್ಠಿಯನ್ನು ಐಎಂಎ ಅಧ್ಯಕ್ಷ ಡಾ.ಧನೇಶ ದೇಸಾಯಿ ಉದ್ಘಾಟಿಸಿದರು.


ನಗರದ ಐಎಂಎ ಸಭಾಂಗಣದಲ್ಲಿ ಗದುಗಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ, ಐಎಂಎ ಹಾಗೂ ಐಎಂಎ ಮಹಿಳಾ ಘಟಕದಿಂದ ಏರ್ಪಡಿಸಿದ್ದ ಮಕ್ಕಳ ಲೈಂಗಿಕ ಕಿರುಕುಳ ವಾಸ್ತವಿಕತೆ ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗ ಮಾಡಿಕೊಂಡಿದ್ದನ್ನು ತಿಳಿಸಲು ಕೆಲವರು ತುಂಬಾ ಗೌರವದ ದೃಷ್ಠಿಯಿಂದ ಹೆದರುತ್ತಾರೆ. ಮುಜುಗರ, ಅಪರಾಧಿ ಅಥವಾ ನಾಚಿಕೆ ಅನುಭವಿಸಬಹುದು. ಕೆಲವರು ತಮ್ಮನ್ನು ದೂಷಿಸುತ್ತಾರೆ ಅಥವಾ ಅವರು ನಿಂದನೆಗೆ ಅರ್ಹರು ಎಂದು ತಿಳಿಯುತ್ತಾರೆ. ಈ ಬಗ್ಗೆ ಪಾಲಕ ಪೋಷಕರಲ್ಲಿ ಜಾಗೃತಿ ಬರಬೇಕಿದೆ ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ಇಡಬೇಕಿದೆ ಎಂದರು.

ಸರಕಾರ ಮತ್ತು ಕಾನೂನು ಪ್ರಾಧಿಕಾರ, ಮಕ್ಕಳ ರಕ್ಷ ಣಾ ಇಲಾಖೆ ಈ ನಿಟ್ಟಿನಲ್ಲಿ ಹಲವಾರು ಕಟ್ಟುನಿಟ್ಟಿನ ಕಾಯ್ದೆ ಕಾನೂನು ರೂಪಿಸಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷ ಣಾಧಿಕಾರಿ ಭಾರತಿ ಶೆಟ್ಟರ, ಡಾ.ಸೋಮಶೇಖರ ಬಿಜ್ಜಳ, ಮಕ್ಕಳ ವಿಭಾಗದ ಮುಖ್ಯಸ್ಥ ಪ್ರಾಧ್ಯಾಪಕ ಡಾ. ಶ್ರೀನಿವಾಸ ಆರೇರ, ವಿಧಿ ವಿಜ್ಞಾನ ಔಷಧ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ಮ್ಯಾಗೇರಿ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಶೃತಿಭಾವಿ ಪಾಟೀಲ ತಮ್ಮ ವಿಚಾರಗಳನ್ನು ಮಂಡಿಸಿದರು.

ಇದೇ ಸಂದರ್ಭದಲ್ಲಿ ಐಎಂಎ ಅಧ್ಯಕ್ಷ ಡಾ.ಧನೇಶ ದೇಸಾಯಿ, ಡಾ.ಶರಣು ಆಲೂರ ಅವರನ್ನು ಸಂಘದಿಂದ ಸನ್ಮಾನಿಸಲಾಯಿತು.

ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ ಅಧ್ಯಕ್ಷೆ ಡಾ.ತಬಸುಮ್‌ ಸೋಲಾಪೂರ ಸ್ವಾಗತಿಸಿದರು. ಡಾ.ಪ್ರವೀಣ ಸಜ್ಜನರ ನಿರೂಪಿಸಿದರು. ಡಾ.ಶೃತಿಭಾವಿ ಪಾಟೀಲ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ