ಆ್ಯಪ್ನಗರ

ಮಾತೃಶ್ರೀ ಯೋಜನೆ ಆರಂಭ

ಗದಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ 5 ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಮತ್ತು ಆರೋಗ್ಯ ಮಟ್ಟ ಸುಧಾರಿಸಲು ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯನ್ನು ರಾಜ್ಯ ಸರಕಾರದಿಂದ ಆರಂಭಿಸಲಾಗಿದೆ.

Vijaya Karnataka 8 Jul 2019, 5:00 am
ಗದಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ 5 ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಮತ್ತು ಆರೋಗ್ಯ ಮಟ್ಟ ಸುಧಾರಿಸಲು ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯನ್ನು ರಾಜ್ಯ ಸರಕಾರದಿಂದ ಆರಂಭಿಸಲಾಗಿದೆ.
Vijaya Karnataka Web launch of the mathrushree project
ಮಾತೃಶ್ರೀ ಯೋಜನೆ ಆರಂಭ


ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್‌, ಆದ್ಯತಾ ಕುಟುಂಬ)ದ ಗರ್ಭಿಣಿ ಹಾಗೂ ಬಾಣಂತಿಯರ( ಮೊದಲ ಎರಡು ಜೀವಂತ ಹೆರಿಗೆಗೆ ಮಾತ್ರ) ಸೀಮಿತವಾಗಿದೆ. ಒಟ್ಟು ಆರು ಕಂತುಗಳಲ್ಲಿ ಅಂದರೆ ಹೆರಿಗೆ ಪೂರ್ವ ಮೂರು ಕಂತುಗಳಲ್ಲಿ 3000 ರೂ.ಹಾಗೂ ಹೆರಿಗೆ ನಂತರ ಮೂರು ಕಂತುಗಳಲ್ಲಿ 3000 ರೂ.ಹೀಗೆ ಒಟ್ಟು 6000 ರೂ. ಆರ್ಥಿಕ ಸಹಾಯದ ಯೋಜನೆ ಇದಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲಿಚ್ಚಿಸುವವರು ನಿಗದಿತ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ತಾಯಿ ಮತ್ತು ಶಿಶು ರಕ್ಷ ಣಾ ಕಾರ್ಡ್‌, ಬಿಪಿಎಲ್‌ ಕಾರ್ಡ್‌, ಫಲಾನುಭವಿ ಆಧಾರ್‌ ಹಾಗೂ ಫಲಾನುಭವಿಯ ಆಧಾರ್‌ ಲಿಂಕ್‌ ಇರುವ ಬ್ಯಾಂಕ್‌ ಖಾತೆ ವಿವರಗಳೊಂದಿಗೆ ಸಂಬಂಧಿಸಿದ ಅಂಗನವಾಡಿ ಕೇಂದ್ರ ಅಥವಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಮಕೃಷ್ಣ ಪಡಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ