ಆ್ಯಪ್ನಗರ

ಕಪ್ಪತಗುಡ್ಡ ವನ್ಯಜೀವಿಧಾಮವಾಗಿ ಮುಂದುವರಿಯಲಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆಯ ಕಪ್ಪತಗುಡ್ಡ ವನ್ಯಜೀವಿಧಾಮಯಾಗಿಯೇ ಮುಂದುವರಿಯಬೇಕೆಂದು ಒತ್ತಾಯಿಸಿ ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆಯಿಂದ ಸೋಮವಾರ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠರಿಗೆ ಮನವಿ ಸಲ್ಲಿಸಿದರು.

Vijaya Karnataka 24 Sep 2019, 5:00 am
ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆಯ ಕಪ್ಪತಗುಡ್ಡ ವನ್ಯಜೀವಿಧಾಮಯಾಗಿಯೇ ಮುಂದುವರಿಯಬೇಕೆಂದು ಒತ್ತಾಯಿಸಿ ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆಯಿಂದ ಸೋಮವಾರ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠರಿಗೆ ಮನವಿ ಸಲ್ಲಿಸಿದರು.
Vijaya Karnataka Web let us continue as the kappadagudda wildlife sanctuary
ಕಪ್ಪತಗುಡ್ಡ ವನ್ಯಜೀವಿಧಾಮವಾಗಿ ಮುಂದುವರಿಯಲಿ


ಉತ್ತರ ಕರ್ನಾಟಕ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದ ಗದಗ ಜಿಲ್ಲೆಯ ಕಪ್ಪತಗುಡ್ಡವನ್ನು ವನ್ಯಜೀವಿಧಾಮ ಎಂದು ರಾಜ್ಯ ಸರಕಾರ ಘೋಷಣೆ ಮಾಡಿದೆ. ಆದರೆ ಕೆಲ ಕಾಣದ ಕೈಗಳು ಈ ಘೊಷಣೆಯನ್ನು ಹಿಂದೇ ಪಡೆಯಲು ಒತ್ತಡ ತರುತ್ತಿದ್ದಾರೆ. ಈ ಯಾವುದೇ ಒತ್ತಡಕ್ಕೆ ಮಣಿಯದೇ ಕಪ್ಪತಗುಡ್ಡ ವನ್ಯಜೀವಿಧಾಮವಾಗಿಯೆ ಮುಂದುವರಿಯಬೇಕೆಂದು ವೇದಿಕೆ ಮನವಿ ಮೂಲಕ ಒತ್ತಾಯಿಸಿದೆ.

ವೇದಿಕೆ ಅದ್ಯಕ್ಷ ವೈ.ಎನ್‌.ಗೌಡರ ಮಾತನಾಡಿ, ಈಗಾಗಲೇ ಮುಂಡರಗಿ ಜ.ಡಾ.ಅನ್ನದಾನೀಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿಕಪ್ಪತಗುಡ್ಡ ವನ್ಯಜೀವಿ ವನ್ಯಧಾಮವಾಗಿ ಮುಂದುವರಿಯಲು ಆಗ್ರಹಿಸಿ ಸಹಿ ಆಂದೋಲನ ಚಳುವಳಿಯ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

ಸಿ.ಕೆ.ಗಣ್ಣಪ್ಪನವರ, ರಾಮಣ್ಣ ಬಳ್ಳಾರಿ, ಮುತ್ತು ಹಾಳಕೇರಿ, ಸಲ್ಮಾನ ಚಕ್ಕಡಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ