ಆ್ಯಪ್ನಗರ

ಲೋಕಸಭೆ ಚುನಾವಣೆ : ಮತದಾರ ಜಾಗೃತಿ

ಗದಗ : ಪ್ರಜಾಪ್ರಭುತ್ವ ಬಲಗೊಳ್ಳುವಲ್ಲಿ ಮತದಾನದ ಪಾತ್ರ ಬಹು ಮುಖ್ಯವಾಗಿದೆ. ಏ.23 ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲೆಯ ಮತಗಟ್ಟೆ ಅಧಿಕಾರಿಗಳು ಪ್ರೇರೇಪಿಸಲು ಮುಂದಾಗಬೇಕು ಎಂದು ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಹೇಳಿದರು.

Vijaya Karnataka 20 Mar 2019, 5:00 am
ಗದಗ : ಪ್ರಜಾಪ್ರಭುತ್ವ ಬಲಗೊಳ್ಳುವಲ್ಲಿ ಮತದಾನದ ಪಾತ್ರ ಬಹು ಮುಖ್ಯವಾಗಿದೆ. ಏ.23 ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲೆಯ ಮತಗಟ್ಟೆ ಅಧಿಕಾರಿಗಳು ಪ್ರೇರೇಪಿಸಲು ಮುಂದಾಗಬೇಕು ಎಂದು ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಹೇಳಿದರು.
Vijaya Karnataka Web GDG-19RUDRAGOUD12
ಗದಗನ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್‌ ಸಮಿತಿ ಏರ್ಪಡಿಸಿದ್ದ ಬೂತ್‌ ಮಟ್ಟದ ಅಧಿಕಾರಿಗಳ ತರಬೇತಿಯಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಮಾತನಾಡಿದರು.


ಸೋಮವಾರ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್‌ ಸಮಿತಿ ಏರ್ಪಡಿಸಿದ್ದ ಬೂತ್‌ ಮಟ್ಟದ ಅಧಿಕಾರಿಗಳ ತರಬೇತಿಯಲ್ಲಿ ಮಾತನಾಡಿದರು.

ಯಾವುದೇ ಅಮಿಷಕ್ಕೊಳ್ಳಗಾಗದೇ ನಿರ್ಭೀತ ಮುಕ್ತ ಮತದಾನದ ಕುರಿತು ತಮ್ಮ ವ್ಯಾಪ್ತಿಯ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಈಗಾಗಲೇ ಶಾಲಾ ಕಾಲೇಜುಗಳಲ್ಲಿ ಯುವ ಮತದಾರರ ನೊಂದಣಿ ಹಾಗೂ ಮತದಾರ ಜಾಗೃತಿ ಕಾರ‍್ಯಗಳನ್ನು ಜರುಗಿಸಲಾಗಿದೆ. ಮತದಾನದ ಜಾಗೃತಿ ಮೂಡಿಸಲು ಬೂತ್‌ ಮಟ್ಟದ ಅಧಿಕಾರಗಳು ತಮ್ಮ ವ್ಯಾಪ್ತಿಯ ಮನೆ ಮನೆಗಳಿಗೆ ಭೇಟಿ ನೀಡಲು ತಿಳಿಸಬೇಕು. ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ಚುನಾವಣೆ ಅಕ್ರಮ ಕಂಡು ಬಂದರೆ ಆ್ಯಪ್‌ ಮೂಲಕ ಸಹಾಯಕ ಚುನಾವಣಾಧಿಕಾರಿಗೆ ಮಾಹಿತಿ ನೀಡಲು ಅವರು ತಿಳಿಸಿದರು.

ಜಿಪಂ ಉಪಕಾರ‍್ಯದರ್ಶಿ ಪ್ರಾಣೇಶ ರಾವ್‌ ಮಾತನಾಡಿ, ಚುನಾವಣೆ ಕಾರ‍್ಯವನ್ನು ಪ್ರಜಾಪ್ರಭುತ್ವದ ಹಬ್ಬ ಅಥವಾ ಉತ್ಸವ ಎಂದು ತಿಳಿದು ಸರ್ವರೂ ಈ ಉತ್ಸವದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕರ್ತವ್ಯವನ್ನು ಮತಗಟ್ಟೆ ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಜಿಲ್ಲಾ ಸ್ವೀಪ್‌ ಸಮಿತಿ ಸದಸ್ಯ ಕಾರ‍್ಯದರ್ಶಿ ಟಿ. ದಿನೇಶ ಮಾತನಾಡಿ,ಚುನಾವಣೆ ಮತಗಟ್ಟೆಗಳಲ್ಲಿ ಸಾಕ್ಷ ರತಾ ಕ್ಲಬ್‌ಗಳನ್ನು ರಚಿಸಲಾಗಿದೆ. ಬೂತ್‌ ಮಟ್ಟದ ಅಧಿಕಾರಿಗಳು ಚುನಾವಣೆ ಪ್ರಕ್ರಿಯೆಯ ಬುನಾದಿಯಂತೆ ಕೆಲಸ ಮಾಡಬೇಕು ಎಂದರು.

ಸಿ.ಎಸ್‌.ನದಾಫ್‌, ವಿ.ಎಸ್‌.ಪಾಟೀಲ, ಜಿ.ಎಂ.ಹಕಾರಿ, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ