ಆ್ಯಪ್ನಗರ

ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ

ಗದಗ: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಪ್ರತಿ ಮನೆ ಮನೆಗೂ ಪೈಪ್‌ಲೈನ್‌ ಅಳವಡಿಸಿ. ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿಗೊಳಿಸಿ, ಬೇಸಿಗೆಯಲ್ಲಿನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ ಎಂದು ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಹೇಳಿದರು.

Vijaya Karnataka 16 Feb 2020, 5:00 am
ಗದಗ: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಪ್ರತಿ ಮನೆ ಮನೆಗೂ ಪೈಪ್‌ಲೈನ್‌ ಅಳವಡಿಸಿ. ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿಗೊಳಿಸಿ, ಬೇಸಿಗೆಯಲ್ಲಿನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ ಎಂದು ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಹೇಳಿದರು.
Vijaya Karnataka Web 15SALIM6_25
ಗದಗ ಜಿಪಂ ಸಭಾಂಗಣದಲ್ಲಿನಡೆದ ಸಭೆಯಲ್ಲಿಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಮಾತನಾಡಿದರು.


ಶನಿವಾರ ನಗರದ ಜಿಪಂ ಸಭಾಂಗಣದಲ್ಲಿನಡೆದ ಜಿಲ್ಲಾನೀರು ಮತ್ತು ನೈರ್ಮಲ್ಯ ಮಿಷನ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ವಸತಿ ನಿಲಯಗಳಿಗೆ ಹಾಗೂ ಆಸ್ಪತ್ರೆಗಳಿಗೆ ನೀರಿನ ಅಗತ್ಯತೆ, ನೀರು ಸರಬರಾಜಿಗೆ ತಗಲುವ ವೆಚ್ಚದ ಕುರಿತು ಮಾ. 1 ರೊಳಗಾಗಿ ಕ್ರಿಯಾ ಯೋಜನೆ ಸಲ್ಲಿಸಬೇಕು. ಸಣ್ಣ ಪುಟ್ಟ ಸಮಸ್ಯೆಗಳಿಂದ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವೇ ದುರಸ್ಥಿಗೊಳಿಸಬೇಕು ಎಂದು ಸೂಚಿಸಿದರು.

ಜಿಪಂ ಉಪಾಧ್ಯಕ್ಷೆ ಮಲ್ಲಮ್ಮ ಬಿಚ್ಚೂರ ಮಾತನಾಡಿ, ಗಜೇಂದ್ರಗಡದ ಕಾಲಕಾಲೇಶ್ವರದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ನೀರಿನ ಸಮಸ್ಯೆ ಉಂಟಾಗಿರುವುದರಿಂದ ಪ್ರತಿನಿತ್ಯ ಟ್ಯಾಂಕರ್‌ ಮೂಲಕ ನೀರು ಹಾಕಿಸಿಕೊಳ್ಳುತ್ತಿದ್ದು, ವಸತಿ ಶಾಲೆಯಲ್ಲಿನ ನೀರಿನ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜನಿಯರ್‌ ಪಿ.ಎ.ಕನವಳ್ಳಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿಕುಡಿಯುವ ಪೂರೈಸಲು ಪೈಪ್‌ಲೈನ್‌ ಅಳವಡಿಕೆ, ಪಂಪ್‌ ನಿರ್ಮಾಣ ಹಾಗೂ ನೀರಿನ ತೊಟ್ಟಿಗಳನ್ನು ನಿರ್ಮಿಸಲು ಜಿಪಂ ಅಧ್ಯಕ್ಷರ ವಿವೇಚನಾ ಅನುದಾನದಡಿ ಸುಮಾರು 1 ಕೋಟಿ ರೂ. ಬಿಡುಗಡೆಯಾಗಿದೆ. ಜಿಲ್ಲೆಯಾದ್ಯಂತ 432 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 378 ಘಟಕಗಳು ಪ್ರಾರಂಭವಿದ್ದರೆ 61 ನೀರಿನ ಘಟಕಗಳು ಕೆಟ್ಟು ನಿಂತಿವೆ. ಅದರಲ್ಲಿ23 ಘಟಕಗಳು ತೀರಾ ಹದಗೆಟ್ಟಿದ್ದು, ಇನ್ನುಳಿದವುಗಳು ಪಂಪ್‌ ರಿಪೇರಿ, ಮೆಮೋರಿ, ವಿದ್ಯುತ್‌ ಸಮಸ್ಯೆಯಿಂದ ಕೆಟ್ಟು ನಿಂತಿವೆ. ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿಗೊಳಿಸಲು ಅನುದಾನದ ಅಗತ್ಯವಿದ್ದು, ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್‌ ಕೆ., ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಈರಪ್ಪ ನಾಡಗೌಡರ, ಜಿಪಂ ಸದಸ್ಯ ಹನುಮಂತಪ್ಪ ಪೂಜಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ