ಆ್ಯಪ್ನಗರ

ಸರಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಿ

ಗದಗ: ರೈತರು ತಮ್ಮ ಹೊಲಗಳ ರಕ್ಷ ಣೆ ಮಾಡುವುದರ ಜತೆಗೆ ಬದು ನಿರ್ಮಾಣ ಮಾಡಿಕೊಳ್ಳಬೇಕು. ನೀರನ್ನು ಮಿತವಾಗಿ ಬಳಸಿ ಬೆಳೆಯ ಉತ್ಪಾದನೆ ಹೆಚ್ಚಿಸಬೇಕು. ಸರಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಪಂ ಸದಸ್ಯ ಶರಣಬಸನಗೌಡ್ರ ಪಾಟೀಲ್‌ ಹೇಳಿದರು.

Vijaya Karnataka 7 Aug 2019, 5:00 am
ಗದಗ: ರೈತರು ತಮ್ಮ ಹೊಲಗಳ ರಕ್ಷ ಣೆ ಮಾಡುವುದರ ಜತೆಗೆ ಬದು ನಿರ್ಮಾಣ ಮಾಡಿಕೊಳ್ಳಬೇಕು. ನೀರನ್ನು ಮಿತವಾಗಿ ಬಳಸಿ ಬೆಳೆಯ ಉತ್ಪಾದನೆ ಹೆಚ್ಚಿಸಬೇಕು. ಸರಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಪಂ ಸದಸ್ಯ ಶರಣಬಸನಗೌಡ್ರ ಪಾಟೀಲ್‌ ಹೇಳಿದರು.
Vijaya Karnataka Web make use of the governments plan
ಸರಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಿ


ತಾಲೂಕಿನ ಕಣವಿ ಗ್ರಾಮದ ಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಹರ್ತಿ ಗ್ರಾಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಗ್ರಾಮ ಸಂಪರ್ಕ ಮತ್ತು ಗ್ರಾಮ ವಾಹಿನಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿರುವ ಕೆರೆಗಳನ್ನು ಸ್ವಚ್ಛಗೊಳಿಸಬೇಕು. ಪರಿಸರ ಸಂರಕ್ಷ ಣೆÜ ಹಾಗೂ ಸರಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಗ್ರಾಮದ ಬೆಳವಣಿಗೆಗೆ ಕೆಲಸ ಮಾಡಬೇಕು ಎಂದರು.

ಗ್ರಾಪಂ ಸದಸ್ಯ ಬಾಪು ಕಿಲೇದಾರ ಮಾತನಾಡಿ, ಸರಕಾರದ ಸವಲತ್ತುಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ರೈತರು ಭೂಮಿಯ ಫಲವತ್ತತೆ ಕಾಯ್ದುಕೊಳ್ಳಬೇಕು ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಎಂ. ಟಿ. ನೇಮರಾಜ ಮಾತನಾಡಿ, ಕಿಸಾನ್‌ ಸಮ್ಮಾನ್‌ ಯೋಜನೆ, ಮೀನುಗಾರರ ಸಾಲ ಹಾಗೂ ನೇಕಾರರ ಸಾಲ ಮನ್ನಾ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಇದೇ ಸಂದರ್ಭದಲ್ಲಿ ಕೊತಬಾಳ ಬಸವ ಬಳಗ ಕಲಾ ತಂಡ ಹಾಗೂ ನೀಲಗುಂದದ ಜೈ ಭೀಮ ಗೀಗೀ ಪದ ಕಲಾ ತಂಡದವರಿಂದ ಜನಪದ ಕಾರ್ಯಕ್ರಮ ನಡೆಯಿತು.

ಮರಿತಾಮಪ್ಪ ಕುರ್ತಕೋಟಿ, ಮಾಬುಸಾಬ ಶಿರಹಟ್ಟಿ, ಈಶಪ್ಪ ನಾಗಲೂಟಿ, ಗುರುನಾಥ ಕಂಬಾರ, ಎಸ್‌.ಎನ್‌ ಪೋಲಿಸ್‌ಗೌಡ್ರ ಇದ್ದರು. ಬಸವರಾಜ ಜಕ್ಕಮ್ಮನÜವರ ಸ್ವಾಗತಿಸಿದರು. ಈರಣ್ಣ ಯಾಳಗಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ