ಆ್ಯಪ್ನಗರ

ಗದಗ: ಕೊರೊನಾ ವೈರಸ್ ಭಯ, ವ್ಯಕ್ತಿ ನೇಣಿಗೆ ಶರಣು

ತನಗೆ ಕೊರೊನಾ ಸೋಂಕು ಬರುತ್ತದೆ ಎಂದು ಭಾವಿಸಿ ಮನನೊಂದು ವ್ಯಕ್ತಿಯೊಬ್ಬರು ಆತ್ಯಹತ್ಯೆ ಮಾಡಿಕೊಂಡ ಘಟನೆ ಗಜೇಂದ್ರಗಡ ತಾಲೂಕಿನ ಕಲ್ಲಿಗನೂರು ಗ್ರಾಮದಲ್ಲಿ ನಡೆದಿದೆ.

Vijaya Karnataka Web 1 Apr 2020, 11:30 am
ಗದಗ: ತನಗೆ ಕೊರೊನಾ ಸೋಂಕು ಬರುತ್ತದೆ ಎನ್ನುವ ಭಯದಿಂದ, ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
Vijaya Karnataka Web suicide

ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಲ್ಲಿಗನೂರು ಗ್ರಾಮದಲ್ಲಿ ಗುರುಸಂಗಪ್ಪ ಜಂಗಣ್ಣವರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಕೂಲಿ ಕೆಲಸಕ್ಕೆ ಎಂದು ಮಂಗಳೂರಿಗೆ ಹೋಗಿದ್ದ ಗುರುಸಂಗಪ್ಪ, ಮೂರು ದಿನಗಳ ಹಿಂದೆ ಕಲ್ಲಿಗನೂರು ಗ್ರಾಮಕ್ಕೆ ವಾಪಸ್ ಆಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಶಾಂತಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ, ವೈದ್ಯರು ಕೊರೊನಾ ವೈರಸ್ ಸೋಂಕು ನಿಮಗೆ ತಗುಲಿಲ್ಲ ಎಂದು ಹೇಳಿದ್ದರು.

ಆದರೆ, ಮಾನಸಿಕ ಖಿನ್ನತೆಯಿಂದ ಕೊರೊನಾ ವೈರಸ್ ಸೋಂಕು ಬರುತ್ತದೆ ಎಂದು ಭಯಗೊಂಡು, ಗ್ರಾಮದ ಹೊರವಲಯದ ಜಮೀನಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನಲೆ, ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ