ಆ್ಯಪ್ನಗರ

ಹಾಲಿನ ಉತ್ಪನ್ನ ಆಮದಾದರೆ ದೇಶಕ್ಕೆ ಕಂಟಕ

ಗದಗ: ಕೇಂದ್ರ ಸರಕಾರ ಆಸ್ಪ್ರೇಲಿಯಾ, ನ್ಯೂಜಿಲೆಂಡ್‌ನಿಂದ ಹಾಲು ಮತ್ತು ಹಾಲಿನ ಉತ್ಪನ್ನ ಆಮದು ಮಾಡಿಕೊಂಡಲ್ಲಿದೇಶದ 10 ಕೋಟಿ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಸರಕಾರ ಇಂಥ ಕ್ರಮಕ್ಕೆ ಮುಂದಾದರೆ ಕಾಂಗ್ರೆಸ್‌ ಬೀದಿಗಳಿದು ಹೋರಾಟ ಮಾಡುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

Vijaya Karnataka 27 Oct 2019, 5:00 am
ಗದಗ: ಕೇಂದ್ರ ಸರಕಾರ ಆಸ್ಪ್ರೇಲಿಯಾ, ನ್ಯೂಜಿಲೆಂಡ್‌ನಿಂದ ಹಾಲು ಮತ್ತು ಹಾಲಿನ ಉತ್ಪನ್ನ ಆಮದು ಮಾಡಿಕೊಂಡಲ್ಲಿದೇಶದ 10 ಕೋಟಿ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಸರಕಾರ ಇಂಥ ಕ್ರಮಕ್ಕೆ ಮುಂದಾದರೆ ಕಾಂಗ್ರೆಸ್‌ ಬೀದಿಗಳಿದು ಹೋರಾಟ ಮಾಡುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
Vijaya Karnataka Web milk product is imported to the country
ಹಾಲಿನ ಉತ್ಪನ್ನ ಆಮದಾದರೆ ದೇಶಕ್ಕೆ ಕಂಟಕ


ಶನಿವಾರ ನಗರದ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿತಾಲೂಕು ಕುರುಬರ ಸಂಘ ಹಾಗೂ ದೇವರಾಜ ಅರಸು ವಸತಿ ನಿಲಯ ಸಮಿತಿ ಆಶ್ರಯದಲ್ಲಿರಾಕೇಶ ಸಿದ್ದರಾಮಯ್ಯಯಾತ್ರಿ ನಿವಾಸ, ಐಟಿಐ ಕಾಲೇಜಿನ ಪ್ರಯೋಗಾಲಯ ಉದ್ಘಾಟನೆ, ಪ್ರತಿಭಾ ಪುರಸ್ಕಾರ, ಸ್ಮರಣ ಸಂಚಿಕೆ ಬಿಡುಗಡೆ, ವಸತಿ ನಿಲಯ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಜಾಗತಿಕ ಸಮಗ್ರ ಆರ್ಥಿಕ ಸಹಭಾಗಿತ್ವದಡಿ ಭಾರತ ಸೇರಿದಂತೆ 16 ದೇಶಗಳು ಒಪ್ಪಂದ ಮಾಡಿಕೊಳ್ಳಲು ಮುಂದಾಗಿವೆ. ನ. 4ರಿಂದ ಅದು ಜಾರಿಯಾಗುತ್ತದೆ ಎನ್ನಲಾಗುತ್ತಿದೆ. ಒಂದು ವೇಳೆ ವಿದೇಶದಿಂದ ಹಾಲಿನ ಉತ್ಪನ್ನ ಆಮದು ಮಾಡಿಕೊಂಡಲ್ಲಿರಾಜ್ಯದ 9 ಲಕ್ಷ ಮಹಿಳೆಯರು ಸೇರಿದಂತೆ ಒಟ್ಟು 25 ಲಕ್ಷ ಮತ್ತು ದೇಶದಲ್ಲಿ10 ಕೋಟಿ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಇದನ್ನು ಕಾಂಗ್ರೆಸ್‌ ಉಗ್ರವಾಗಿ ಖಂಡಿಸಿದೆ. ಇಷ್ಟಾಗಿಯೂ ಸರಕಾರ ಈ ಯೋಜನೆ ಜಾರಿಗೆ ಮುಂದಾದರೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದರು.

78 ಲಕ್ಷ ಲೀ. ಹಾಲು ಉತ್ಪಾದನೆ :
ರಾಜ್ಯದಲ್ಲಿಸಧ್ಯ ಪ್ರತಿದಿನ 78 ಲಕ್ಷ ಲೀ. ಹಾಲು ಉತ್ಪಾದನೆ ಆಗುತ್ತಿದೆ. ಹಾಲು ಉತ್ಪಾದನೆಯಲ್ಲಿಗುಜರಾತ್‌ ನಂ. 1 ಸ್ಥಾನದಲ್ಲಿದೆ. ಕರ್ನಾಟಕ 2ನೇ ಸ್ಥಾನದಲ್ಲಿದೆ. ಹೈನೋದ್ಯಮ ಅನೇಕ ಜನರಿಗೆ ಉದ್ಯೋಗ ಕಲ್ಪಿಸಿದೆ. ರೈತರಿಗೆ ಪರಾರ‍ಯಯ ಆದಾಯ ಮೂಲವಾಗಿದೆ. ಹೀಗಾಗಿ ಸರಕಾರ ರೈತರನ್ನು ಹಾಳು ಮಾಡುವ ಇಂಥ ಕೆಲಸಕ್ಕೆ ಮುಂದಾಗಬಾರದು. ರೈತರೂ ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.

ಶಾಸಕ ಎಚ್‌.ಕೆ. ಪಾಟೀಲ, ವಿಪ ಸದಸ್ಯ ಎಚ್‌.ಎಂ. ರೇವಣ್ಣ, ಶಾಸಕರಾದ ಡಾ. ಯತೀಂದ್ರ,ಕುಸುಮಾ ಶಿವಳ್ಳಿ, ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ, ಮಾಜಿ ಶಾಸಕರಾದ ಜಿ.ಎಸ್‌. ಪಾಟೀಲ, ಬಿ.ಆರ್‌. ಯಾವಗಲ್‌, ರಾಮಕೃಷ್ಣ ದೊಡ್ಡಮನಿ, ಶ್ರೀಶೈಲಪ್ಪ ಬಿದರೂರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ