ಆ್ಯಪ್ನಗರ

ರೈತರ ಕಷ್ಟ ಕೇಳದ ಮೋದಿ

ನರೇಗಲ್‌ : ಐದು ವರ್ಷದಲ್ಲಿ ದೇಶದ ರೈತರ ಕಷ್ಟ ಕೇಳದ ಪುಣ್ಯಾತ್ಮ ಪ್ರಧಾನಿ ನರೇಂದ್ರ ಮೋದಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ಹರಿಹಾಯ್ದರು.

Vijaya Karnataka 19 Apr 2019, 5:00 am
ನರೇಗಲ್‌ : ಐದು ವರ್ಷದಲ್ಲಿ ದೇಶದ ರೈತರ ಕಷ್ಟ ಕೇಳದ ಪುಣ್ಯಾತ್ಮ ಪ್ರಧಾನಿ ನರೇಂದ್ರ ಮೋದಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ಹರಿಹಾಯ್ದರು.
Vijaya Karnataka Web GDG-18SALIM1


ಗುರುವಾರ ರೋಣ ತಾಲೂಕಿನ ನರೇಗಲ್‌ ಪಟ್ಟಣದಲ್ಲಿ ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ. ಆದರೆ, ದೇಶದ 15 ಸಿರಿವಂತರ 3.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದರು ಎಂದು ಟೀಕಿಸಿದರು.

ಮೂರು ವರ್ಷ ಜೈಲಿನಲ್ಲಿ ಇದ್ದು ಬಂದ ಅಮಿತ್‌ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ. ಭ್ರಷ್ಟಾಚಾರದ ಆರೋಪದ ಮೇಲೆ ಜೈಲು ಕಂಡು ಬಂದ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ. ಕಾಕತಾಳೀಯ ಎಂಬಂತೆ ಜೈಲಿಗೆ ಹೋಗಿ ಬಂದವರೆಲ್ಲಾ ಬಿಜೆಪಿ ಪಕ್ಷದ ಅಧ್ಯಕ್ಷರಾಗಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿಲ್ಲ. ಉದ್ದುದ್ದು ನಾಲಿಗೆ ಹರಿಬಿಡುವ ಈಶ್ವರಪ್ಪ ಕುರುಬ ಸಮುದಾಯದ ಒಬ್ಬರಿಗಾದರೂ ಟಿಕೆಟ್‌ ಕೊಡಿಸಿದ್ದಾನಾ? ಮಾನ ಮರ್ಯಾದೆ ಇಲ್ಲದ ಈಶ್ವರಪ್ಪನಿಗೆ ನಾಚಿಕೆಯೂ ಆಗಲ್ಲ. ಅದೇ ಕಾಂಗ್ರೆಸ್‌ ಜೆಡಿಎಸ್‌ ಸಮ್ಮಿಶ್ರ ಸರಕಾರ ಎಲ್ಲ ವರ್ಗದ ಜನರಿಗೆ ಟಿಕೆಟ್‌ ಕೊಟ್ಟಿದೆ ಎಂದು ಈಶ್ವರಪ್ಪ ವಿರುದ್ಧ ಟೀಕಿಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ , ಶಾಸಕ ಎಚ್‌.ಕೆ. ಪಾಟೀಲ ಮಾತನಾಡಿ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದ ಪ್ರಧಾನಿ ಮೋದಿ, ಈ ಹಿಂದೆ ಮನಮೋಹನ ಸಿಂಗ್‌ ಪ್ರಧಾನಿಯಾಗಿದ್ದಾಗ ಸೃಷ್ಟಿಸಿದ್ದ 40 ಕೋಟಿ ಉದ್ಯೋಗದಲ್ಲಿ 1.70 ಕೋಟಿ ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದಾರೆ. ಹೊಸ ಉದ್ಯೋಗ ಸೃಷ್ಟಿ ಬಿಡಿ, ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗಿನ ಉದ್ಯೋಗಗಳು ಎಲ್ಲಿ ಹೋದವು ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಮಾತನಾಡಿ, ಮಾತು ಕೊಟ್ಟು ಮರಳು ಮಾಡಿ ಮರೆಯುವುದು ಬಿಜೆಪಿ ಸಂಸ್ಕೃತಿ. ಬಿಜೆಪಿ ಕಾರ್ಯವೈಖರಿ ಬಗ್ಗೆ ಜನ ಬೇಸತ್ತಿದ್ದಾರೆ. ಜನ ಬದಲಾವಣೆ ಬಯಸಿದ್ದು, ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಜಿ.ಎಸ್‌. ಪಾಟೀಲ, ಮಾಜಿ ಶಾಸಕರಾದ ಶ್ರೀಶೈಲಪ್ಪ ಬಿದರೂರ, ಬಿ.ಆರ್‌. ಯಾವಗಲ್‌, ಜಿಪಂ ಸದಸ್ಯ ವಾಸಣ್ಣ ಕುರುಡಗಿ, ರೂಪಾ ಅಂಗಡಿ, ಫಕೀರಪ್ಪ ಹೆಬಸೂರ, ನೀಲಕಂಠಪ್ಪ ಅಸೂಟಿ, ಐ.ಎಸ್‌. ಪಾಟೀಲ, ಅಂದಾನಯ್ಯ ಕುರ್ತಕೋಟಿಮಠ ಇತರರು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ