ಆ್ಯಪ್ನಗರ

ಉಭಯ ಶ್ರೀಗಳ ಪುಣ್ಯಸ್ಮರಣೆ 29 ರಂದು

ಗದಗ :ಲಿಂ.ಪಂ.ಪಂಚಾಕ್ಷರ ಗವಾಯಿಗಳು, ಲಿಂ.ಪಂ.ಪುಟ್ಟರಾಜ ಕವಿ ಗವಾಯಿಗಳ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಕುಮಾರೇಶ್ವರ ಕೃಪಾ ಪೋಷಿತ ಪಂ.ಪಂಚಾಕ್ಷರ ಗವಾಯಿಗಳ ನಾಟ್ಯ ಸಂಘದ ವಜ್ರ ಮಹೋತ್ಸವ ಸಮಾರಂಭ ಜೂ.29 ರಿಂದ ಜು.3ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ವೀರೇಶ್ವರ ಪುಣ್ಯಾಶ್ರಮದ ಬಸವರಾಜಸ್ವಾಮಿ ಹಿಡ್ಕಿಮಠ ತಿಳಿಸಿದರು.

Vijaya Karnataka 27 Jun 2018, 5:00 am
ಗದಗ :ಲಿಂ.ಪಂ.ಪಂಚಾಕ್ಷರ ಗವಾಯಿಗಳು, ಲಿಂ.ಪಂ.ಪುಟ್ಟರಾಜ ಕವಿ ಗವಾಯಿಗಳ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಕುಮಾರೇಶ್ವರ ಕೃಪಾ ಪೋಷಿತ ಪಂ.ಪಂಚಾಕ್ಷರ ಗವಾಯಿಗಳ ನಾಟ್ಯ ಸಂಘದ ವಜ್ರ ಮಹೋತ್ಸವ ಸಮಾರಂಭ ಜೂ.29 ರಿಂದ ಜು.3ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ವೀರೇಶ್ವರ ಪುಣ್ಯಾಶ್ರಮದ ಬಸವರಾಜಸ್ವಾಮಿ ಹಿಡ್ಕಿಮಠ ತಿಳಿಸಿದರು.
Vijaya Karnataka Web on the 29th of the dual saints
ಉಭಯ ಶ್ರೀಗಳ ಪುಣ್ಯಸ್ಮರಣೆ 29 ರಂದು


ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರೇಶ್ವರ ಪುಣ್ಯಾಶ್ರಮದ 105ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ವರ್ಷ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೂ.29ರಂದು ಜಾತ್ರೆ ಉದ್ಘಾಟನೆ, ಜೂ.30ರಂದು ವೀರೇಶ್ವರ ಪುಣ್ಯಾಶ್ರಮದ ವರ್ಷಾಚರಣೆ, ಜು.1ರಂದು ಶ್ರೀ ಕುಮಾರೇಶ್ವರ ಕೃಪಾಪೋಷಿತ ಪಂ. ಪಂಚಾಕ್ಷರಿ ಗವಾಯಿಗಳ ನಾಟ್ಯ ಸಂಘದ ವಜ್ರ ಮಹೋತ್ಸವ ಸಮಾರಂಭ, ಜು.2ರಂದು ಪದ್ಮಭೂಷಣ ಡಾ.ಪಂ. ಪುಟ್ಟರಾಜ ಕವಿ ಗವಾಯಿಗಳ ಶತಪಂಚಮಿ ಜಯಂತ್ಯುತ್ಸವ ಹಾಗೂ ಜು.3 ರಂದು ಮಹಾರಥೋತ್ಸವ ಹಾಗೂ ಅಹೋರಾತ್ರಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಪಂಚಾಕ್ಷರಿ ಗವಾಯಿಗಳ 74ನೇ ಸ್ವರ ಸಾಮಾರಾಧನೆ, ಪುಟ್ಟರಾಜ ಗವಾಯಿಗಳ 8ನೇ ಪುಣ್ಯಾರಾಧನೆ ನಿಮಿತ್ತ ಐದು ದಿನ ಧಾರ್ಮಿಕ ಕಾರ್ಯಕ್ರಮಗಳು, ಪುರಾಣ ಪ್ರವಚನ, ಧರ್ಮ ಸಭೆ ಹಾಗೂ ಕೀರ್ತನೆ ಸಮ್ಮೇಳನ ಹಾಗೂ 105 ಮಹನೀಯರಿಗೆ ಕುಮಾರ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಜಾತ್ರೆ ಮಹೋತ್ಸವದ ಉದ್ಘಾಟನೆ ಸಮಾರಂಭಕ್ಕೆ ಉಜ್ಜಯಿನಿ ಶ್ರೀಗಳು, ಸಾವಳಗಿಯ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ, ವಾರಣಾಸಿಯ ಜ.ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಜ.ಅನ್ನದಾನೀಶ್ವರ ಶ್ರೀ ಸೇರಿದಂತೆ ನಾಡಿನ ಹರ ಗುರು ಚರ ಮೂರ್ತಿಗಳು ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ದೇಶ, ವಿದೇಶದ ಅನೇಕ ಸಂಗೀತಗಾರರು ತಮ್ಮ ಕಲೆ ಪ್ರದರ್ಶಿಸಲಿದ್ದಾರೆ. ಐದು ದಿನ ನಡೆಯುವ ಈ ಉತ್ಸವದಲ್ಲಿ ಸಂಗೀತ ಲೋಕವೇ ಅನಾವರಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನಿಂಗಪ್ಪ ಕೆಂಗಾರ, ಪ್ರಕಾಶ ಬಸರಿಗಿಡದ, ಪ್ರಭುಲಿಂಗಯ್ಯ ಹಿರೇಮಠ, ವಸಂತಗೌಡ ಪೊಲೀಸ್‌ ಪಾಟೀಲ, ಶಿವರುದ್ರಪ್ಪ ಇಟಗಿ, ಚನ್ನವೀರಸ್ವಾಮಿ ಬಾಳೇಹಳ್ಳಿಮಠ, ಚನ್ನಬಸಯ್ಯ ಬಂಕಾಪುರಮಠ, ಪರಶುರಾಮ ಕಟ್ಟೀಮನಿ, ಸಂಗಮೇಶ ದುಂದೂರ, ಮುರಘಯ್ಯ ಹಿರೇಮಠ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ