ಆ್ಯಪ್ನಗರ

ಬಿಜೆಪಿಯಲ್ಲಿ 105 ಶಾಸಕರಾದ ಬಳಿಕ ರಾಜ್ಯ ರಾಜಕೀಯ ಚಿತ್ರಣ ಬದಲು: ಶೋಭಾ ಕರಂದ್ಲಾಜೆ

'ನಾವು ಆಪರೇಷನ್ ಕಮಲ ಮಾಡದಂತೆ ತೀರ್ಮಾನ ಆಗಿದೆ. ಕಾಂಗ್ರೆಸ್‌ನ ಒಳ ಜಗಳದಿಂದ ದಿನಕೊಬ್ಬರು ಶಾಸಕರು ಬಂಡಾಯ ಏಳುತ್ತಿದ್ದು, ಸಮ್ಮಿಶ್ರ ಸರಕಾರದಲ್ಲಿ ಯಾವುದು ಸರಿ ಇಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

Vijaya Karnataka Web 25 Oct 2018, 10:59 am
ಗದಗ: ಬಿಜೆಪಿಯಲ್ಲಿ 105 ಶಾಸಕರಾದ ಬಳಿಕ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
Vijaya Karnataka Web shobha
ಫೈಲ್ ಚಿತ್ರ


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು ಆಪರೇಷನ್ ಕಮಲ ಮಾಡದಂತೆ ತೀರ್ಮಾನ ಆಗಿದೆ. ಕಾಂಗ್ರೆಸ್‌ನ ಒಳ ಜಗಳದಿಂದ ದಿನಕೊಬ್ಬರು ಶಾಸಕರು ಬಂಡಾಯ ಏಳುತ್ತಿದ್ದು, ಸಮ್ಮಿಶ್ರ ಸರಕಾರದಲ್ಲಿ ಯಾವುದು ಸರಿ ಇಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಹೇಗಾದರೂ ಮಾಡಿ ಪಕ್ಷದಿಂದ ಹೊರಬರಬೇಕು ಎಂದು ಕಾಂಗ್ರೆಸ್ ಶಾಸಕರು ನಿರ್ಧರಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯಲ್ಲಿ 105 ಶಾಸಕರಾದ ಬಳಿಕ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದೆ ಎಂದು ಅವರು ಭವಿಷ್ಯ ನುಡಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ರೇವಣ್ಣ ಅವರು ಕಾಂಗ್ರೆಸ್ ಶಾಸಕರ ಕೆಲಸ ಮಾಡಿಕೊಡುತ್ತಿಲ್ಲ ಆರೋಪಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ನ ಅವನತಿ ಆರಂಭವಾಗತ್ತಿದೆ ಎಂದರು.

ಶಿವಮೊಗ್ಗ, ಬಳ್ಳಾರಿ, ಜಮಖಂಡಿಯನ್ನು ನೂರಕ್ಕೆ ನೂರು ಗೆಲ್ಲುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ