ಆ್ಯಪ್ನಗರ

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ

ಮುಳಗುಂದ: ಕೇಂದ್ರದ ಬಿಜೆಪಿ ಸರಕಾರ ರೈತರ ಹಿತ ಕಾಪಾಡುವಲ್ಲಿವಿಫಲವಾಗುತ್ತಿದೆ ಎಂದು ಮಾಜಿ ಶಾಸಕ ಡಿ.ಆರ್‌.ಪಾಟೀಲ್‌ ಹೇಳಿದರು. ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿಗಳ ಕಲಾ ಭವನದಲ್ಲಿ ಕುರ್ತಕೋಟಿ ಹಾಗೂ ಮುಳಗುಂದ ಭಾಗದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡ ಎಪಿಎಂಸಿ ಕಾಯ್ದೆ

Vijaya Karnataka 25 Nov 2020, 5:00 am
ಮುಳಗುಂದ: ಕೇಂದ್ರದ ಬಿಜೆಪಿ ಸರಕಾರ ರೈತರ ಹಿತ ಕಾಪಾಡುವಲ್ಲಿವಿಫಲವಾಗುತ್ತಿದೆ ಎಂದು ಮಾಜಿ ಶಾಸಕ ಡಿ.ಆರ್‌.ಪಾಟೀಲ್‌ ಹೇಳಿದರು. ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿಗಳ ಕಲಾ ಭವನದಲ್ಲಿ ಕುರ್ತಕೋಟಿ ಹಾಗೂ ಮುಳಗುಂದ ಭಾಗದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಆಗುತ್ತಿರುವ ಅನ್ಯಾಯ ವಿರೋಧಿಸಿ ರೈತರಿಂದ ಪತ್ರ ಚಳುವಳಿ ಸಭೆಯಲ್ಲಿಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್‌ ಯಾವಾಗಲೂ ರೈತರ ಪರವಾಗಿದೆ. ಬಿಜೆಪಿ ಸರಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ, ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಕಾಂಗ್ರೆಸ್‌ದಿಂದ ಪತ್ರ ಚಳುವಳಿ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡ ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್‌ ಪಡೆದು ರೈತರ ಬದುಕನ್ನು ಕಾಪಾಡುವ ಕೆಲಸ ಮಾಡಬೇಕು ಎಂದರು.
Vijaya Karnataka Web 24MUL 1_25
ಮುಳಗುಂದ ಬಾಲಲೀಲ ಮಹಾಂತ ಶಿವಯೋಗಿ ಕಲಾ ಭವನದಲ್ಲಿಹಮ್ಮಿಕೊಂಡ ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರಿಂದ ಪತ್ರ ಚಳುವಳಿ ಕಾರ್ಯಕ್ರಮದಲ್ಲಿಮಾಜಿ ಶಾಸಕ ಡಿ.ಆರ್‌.ಪಾಟೀಲ ಮಾತನಾಡಿದರು.


ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್‌.ಎಸ್‌.ಪಾಟೀಲ್‌ ಮಾತನಾಡಿ, ದೇಶದ ಬೆನ್ನೆಲುಬು ರೈತನಾಗಿದ್ದು, ರೈತರ ಹಿತ ಕಾಪಾಡುವ ಕಾಯ್ದೆ ಜಾರಿಗೆ ಬರಬೇಕು. ಎಪಿಎಂಸಿ ಕಾಯ್ದೆ ಜಾರಿಯಿಂದ ರೈತರಿಗೆ ಮಾರುಕಟ್ಟೆ ಕಾಮಿಕರಿಗೆ ತುಂಬಾ ಅನ್ಯಾಯವಾಗುತ್ತಿದೆ. ಇದನ್ನು ಖಂಡಿಸಿ ಪತ್ರ ಚಳುವಳಿ ಮೂಲಕ ರಾಷ್ಟ್ರಪತಿ ಗಮನಕ್ಕೆ ತಂದು ಮೊದಲಿನ ಎಪಿಎಂಸಿ ನಿಯಮಾವಳಿ ಬರುವವರೆಗೂ ರೈತರ ಪರ ಹೋರಾಟ ಮಾಡುತ್ತೇವೆ ಎಂದರು,

ಜಿ.ವಿ.ಬಳಗಾನೂರ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಎಸ್‌.ಎಂ.ನೀಲಗುಂದ, ಬಿ.ವಿ.ಸುಂಕಾಪೂರ, ಎಸ್‌.ಎಸ್‌.ಪಾಟೀಲ, ಅಪ್ಪಣ್ಣ ಇನಾಮತಿ, ನೀಲಮ್ಮಾ ಬೋಳನವರ, ಬಸವರಾಜ ಕಡೆಮನಿ, ಪಪಂ ಅಧ್ಯಕ್ಷ ಹೋನ್ನಪ್ಪ ವಡ್ಡರ, ಉಪಾಧ್ಯಕ್ಷ ಖುರ್ಷಿದಾ ಕಲ್ಲಣ್ಣವರ, ಚಂಪಾವತಿ ಗುಳೆದ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ