ಆ್ಯಪ್ನಗರ

ಗೋವಾ ಸಿಎಂ ಹೇಳಿಕೆಗೆ ಆಕ್ರೋಶ

ನರಗುಂದ: ಈ ಭಾಗದ 4 ದಶಕಗಳ ಬೇಡಿಕೆ ಈಡೇರಿಕೆಗೆ ಮತ್ತೆ ಬೀದಿಗೆ ಇಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಮೂರು ರಾಜ್ಯದ ಮುಖ್ಯಮಂತ್ರಿಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಿದ್ದ ಸಂದರ್ಭದಲ್ಲಿಗೋವಾ ಸಿಎಂ ಮಾತುಕತೆ ಅಸಾಧ್ಯ ಎಂಬ ಹೇಳಿಕೆ ನೀಡಿರುವುದಕ್ಕೆ ರೈತ ಹೋರಾಟ ಸಮಿತಿಯ ಎಸ್‌.ಬಿ.ಜೋಗಣ್ಣವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka 16 Sep 2019, 5:00 am
ನರಗುಂದ: ಈ ಭಾಗದ 4 ದಶಕಗಳ ಬೇಡಿಕೆ ಈಡೇರಿಕೆಗೆ ಮತ್ತೆ ಬೀದಿಗೆ ಇಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಮೂರು ರಾಜ್ಯದ ಮುಖ್ಯಮಂತ್ರಿಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಿದ್ದ ಸಂದರ್ಭದಲ್ಲಿಗೋವಾ ಸಿಎಂ ಮಾತುಕತೆ ಅಸಾಧ್ಯ ಎಂಬ ಹೇಳಿಕೆ ನೀಡಿರುವುದಕ್ಕೆ ರೈತ ಹೋರಾಟ ಸಮಿತಿಯ ಎಸ್‌.ಬಿ.ಜೋಗಣ್ಣವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web outrage over goa cms statement
ಗೋವಾ ಸಿಎಂ ಹೇಳಿಕೆಗೆ ಆಕ್ರೋಶ


ಮಹದಾಯಿ, ಕಳಸಾ ಬಂಡೂರಿ ಯೋಜನ ಜಾರಿಗೆ ಒತ್ತಾಯಿಸಿ ಶನಿವಾರ ನಡೆದ 1521ನೇ ದಿನ ಧರಣಿಯಲ್ಲಿಮಾತನಾಡಿದರು. ಕರ್ನಾಟಕ, ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮಹದಾಯಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಪ್ಪಿಗೆ ನೀಡಿದ್ದರು.ಆದರೆ ಗೋವಾ ಸಿಎಂ ಮಾತುಕತೆ ಸಾಧ್ಯವಿಲ್ಲ, ಕೋರ್ಟ್‌ ಮೂಲಕ ಪರಿಹಾರ ಕಂಡುಕೊಳ್ಳುವ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ ಎಂದರು.

ರೈತ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಮಾತನಾಡಿ, ಮುಖ್ಯಮಂತ್ರಿಗಳು ಪರಸ್ಪರ ಮಾತುಕತೆಗೆ ಮುಂದಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸುತ್ತಿರುವಾಗ ಗೋವಾ ಸಿಎಂ ಮತ್ತೆ ತಮ್ಮ ಹಳೆ ಚಾಳಿ ಬಿಟ್ಟಿಲ್ಲ. ಇವರ ನಡೆ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಕೂಡಲೆ ಪ್ರಧಾನಿ ಮಧ್ಯ ಪ್ರವೇಶಿಸಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಪರಿಹಾರ ನೀಡಬೇಕು. ನ್ಯಾಯಾಧೀಕರಣ ನೀಡಿದ ತೀರ್ಪಿನಂತೆ ಗಜೆಟ್‌ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಸುಭಾಶ ಗಿರಿಯಣ್ಣವರ ಮಾತನಾಡಿ, ಸೆ.17ರಂದು ನವೀಲು ತೀರ್ಥ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಇದ್ದು ಹೆಚ್ಚಿನ ರೈತರು ಪಾಲ್ಗೊಳ್ಳಬೇಕು. ಅಂದು ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದರು. ವೇದಿಕೆಯಲ್ಲಿಕಲ್ಲಪ್ಪ ಮಾರಬಸನ್ನವರ, ರುದ್ರಗೌಡ ಮುದಿಗೌಡ್ರ, ಪರಮೇಶ ಅಣ್ಣಿಗೇರಿ, ಅರ್ಜುನ ಮಾನೆ,ದೇವಕ್ಕ ಚಲವಾದಿ, ಶಾಂತವ್ವ ಪೂಜಾರ, ಅನಸವ್ವ ಶಿಂಧೆ, ನಾಗರತ್ನ ಸೌಳಬಾವಿ, ವೆಂಕಪ್ಪ ಹುಜರತ್ತಿ,ಚನ್ನಪ್ಪಗೌಡ ಪಾಟೀಲ, ಯಲ್ಲಪ್ಪ ಗುಡದರಿ ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ