ಆ್ಯಪ್ನಗರ

12ರಿಂದ ಪರಂಪರಾ ವಸ್ತ್ರ ಉತ್ಸವ

ಗದಗ: ಜಿಲ್ಲಾಪಂಚಾಯಿತಿ, ಕೇಂದ್ರ ಹಾಗೂ ರಾಜ್ಯ ಸರಕಾರದ ಕೈಮಗ್ಗ ಹಾಗೂ ಜವಳಿ ಇಲಾಖೆಗಳು ಹಾಗೂ ಕಾವೇರಿ ಹ್ಯಾಂಡ್‌ಲೂಮ್‌ ಆಶ್ರಯದಲ್ಲಿನಗರದಲ್ಲಿಫೆ.12 ರಿಂದ 26 ರವರೆಗೆ ತೋಂಟದಾರ್ಯ ಮಠದ ಆವರಣದಲ್ಲಿರಾಜ್ಯ ಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ.

Vijaya Karnataka 10 Feb 2020, 5:00 am
ಗದಗ: ಜಿಲ್ಲಾಪಂಚಾಯಿತಿ, ಕೇಂದ್ರ ಹಾಗೂ ರಾಜ್ಯ ಸರಕಾರದ ಕೈಮಗ್ಗ ಹಾಗೂ ಜವಳಿ ಇಲಾಖೆಗಳು ಹಾಗೂ ಕಾವೇರಿ ಹ್ಯಾಂಡ್‌ಲೂಮ್‌ ಆಶ್ರಯದಲ್ಲಿನಗರದಲ್ಲಿಫೆ.12 ರಿಂದ 26 ರವರೆಗೆ ತೋಂಟದಾರ್ಯ ಮಠದ ಆವರಣದಲ್ಲಿರಾಜ್ಯ ಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ.
Vijaya Karnataka Web parampara costume festival from 12th
12ರಿಂದ ಪರಂಪರಾ ವಸ್ತ್ರ ಉತ್ಸವ


ಫೆ. 12ರಂದು ಸಂಜೆ 5ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಗಣಿ, ಭೂವಿಜ್ಞಾನ ಮತ್ತು ಅರಣ್ಯ ಸಚಿವ ಸಿ.ಸಿ. ಪಾಟೀಲ ಚಾಲನೆ ನೀಡುವರು. ಶಾಸಕ ಎಚ್‌.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.

ಜಿಲ್ಲಾಪಂಚಾಯಿತಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಜಿಲ್ಲೆಯ ಸಂಸದರು, ವಿಧಾನ ಪರಿಷತ್‌ ಸದಸ್ಯರು, ತಾಪಂ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಜವಳಿ ಅಭಿವೃದ್ಧಿ ಆಯುಕ್ತ ಉಪೇಂದ್ರ ಪ್ರತಾಪ ಸಿಂಗ್‌, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಡಾ.ಆನಂದ್‌ ಕೆ., ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಯತೀಶ, ಕೈಮಗ್ಗ ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ ನಿರಾಳೆ, ಉಪನಿರ್ದೇಶಕ ಜವಾಹರಲಾಲ್‌ ಕುನ್ಸೋತ್‌ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಕಾವೇರಿ ಹ್ಯಾಂಡಲೂಮ್ಸ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌. ಮುದ್ದಯ್ಯ, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ನರಸಾಪುರ ಪ್ರಾಚಾರ್ಯ ಎಚ್‌.ಎಸ್‌. ಸೋಮಗೌಡರ ಸಮಾರಂಭದಲ್ಲಿಭಾಗವಹಿಸುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿಪರಂಪರಾ ವಸ್ತ್ರ ಉತ್ಸವಕ್ಕೆ ಆಗಮಿಸಿ ಯಶಸ್ವಿಗೊಳಿಸಲು ಕೈಮಗ್ಗ ಜವಳಿ ಇಲಾಖೆ ಉಪನಿರ್ದೇಶಕ ಡಾ. ಶಿವರಾಜ್‌ ಕುಲಕರ್ಣಿ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ