ಆ್ಯಪ್ನಗರ

ಹುಲಕೋಟಿಯಲ್ಲಿ ಡಿ.ಆರ್‌. ಪಾಟೀಲ ವೋಟಿಂಗ್‌

ಗದಗ : ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಚ್‌.ಕೆ. ಪಾಟೀಲ ಅವರು ತಮ್ಮ ಸ್ವಗ್ರಾಮ ಹುಲಕೋಟಿಯಲ್ಲಿ ಮತದಾನ ಮಾಡಿದರು.

Vijaya Karnataka 24 Apr 2019, 5:00 am
ಗದಗ : ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಚ್‌.ಕೆ. ಪಾಟೀಲ ಅವರು ತಮ್ಮ ಸ್ವಗ್ರಾಮ ಹುಲಕೋಟಿಯಲ್ಲಿ ಮತದಾನ ಮಾಡಿದರು.
Vijaya Karnataka Web GDG-23SALIM1
ಹುಲಕೋಟಿಯಲ್ಲಿ ಶಾಸಕ ಎಚ್‌.ಕೆ. ಪಾಟೀಲ ಮತ ಚಲಾಯಿಸಿದರು.


ಗ್ರಾಮದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ ನಂ. 2ರಲ್ಲಿ ಡಿ.ಆರ್‌. ಪಾಟೀಲ ಮತ್ತು ಎಚ್‌.ಕೆ. ಪಾಟೀಲ ಜತೆಯಾಗಿ ಆಗಮಿಸಿ ಮತ ಚಲಾಯಿಸಿ ಗಮನ ಸೆಳೆದರು.

ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಚ್‌.ಕೆ. ಪಾಟೀಲ, ಗ್ರಾಮೀಣ ಭಾಗದಲ್ಲಿ ಮೋದಿ ಅಲೆ ನಡೆಯಲ್ಲ. ಗ್ರಾಮಾಭಿವೃದ್ಧಿಗೆ ಒತ್ತು ಕೊಟ್ಟ ಡಿ.ಆರ್‌. ಪಾಟೀಲ ಅಲೆ ಗದಗನಲ್ಲಿದೆ. ಹಾವೇರಿ-ಗದಗನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಕ್ರೀಯರಾಗಿ ಕೆಲಸ ಮಾಡಿದ್ದಾರೆ. ಹಾವೇರಿ ಸೇರಿಂದಂತೆ ಉತ್ತರ ಕರ್ನಾಟಕ ಭಾಗದ 14 ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಜನ ಒಲವು ವ್ಯಕ್ತಪಡಿಸಿದ್ದಾರೆ ಎಂದರು.

ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಮತ್ತಷ್ಟು ಗಟ್ಟಿಗೊಳ್ಳಲಿದೆ. ಮೋದಿ ಗೆಲ್ಲಬಹುದು ಅಥವಾ ಬಿಡಬಹುದು. ಆದರೆ ಕರ್ನಾಟಕದಲ್ಲಿ ಸಮ್ಮಿಶ್ರ ಸರಕಾರ ಮತ್ತಷ್ಟು ಗಟ್ಟಿಯಾಗಲಿದೆ. ಬಿಜೆಪಿಯವರು ಈ ಕುರಿತು ಮುಂಚೆಯಿಂದಲೂ ಹೇಳುತ್ತಲೇ ಇದ್ದಾರೆ. ಈ ಬಗ್ಗೆ ಸಿದ್ಧರಾಮಯ್ಯ ಆತಂಕ ವ್ಯಕ್ತಪಡಿಸಿದ ಬಗ್ಗೆ ನನಗೆ ಗೊತ್ತಿಲ್ಲ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರಕಾರ ಪತನವಾಗುವುದಿಲ್ಲ ಎಂದರು.

ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಮಾತನಾಡಿ, 1971 ರಿಂದ ನಡೆದ ಎಲ್ಲ ಚುನಾವಣೆಯನ್ನು ಗಮನಿಸಿದ್ದೇನೆ. ಆದರೆ ಈ ಬಾರಿಯಷ್ಟು ಶಾಂತಿಯುತ ಮತದಾನ ಎಲ್ಲೂ ನೋಡಿಲ್ಲ. ಕಾಂಗ್ರೆಸ್‌ -ಜೆಡಿಎಸ್‌ ಕಾರ್ಯಕರ್ತರು ಸಾಕಷ್ಟು ಶ್ರಮಿಸಿದ್ದಾರೆ. ಹೀಗಾಗಿ ಗೆಲ್ಲುವ ವಿಶ್ವಾಸವಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ