ಆ್ಯಪ್ನಗರ

ಎಕರೆಗೆ 1, ಮನೆಗೆ 10 ಲಕ್ಷ ಪರಿಹಾರಕ್ಕೆ ಒತ್ತಾಯ

ನರಗುಂದ: ಬೆಣ್ಣೆ ಹಳ್ಳ ಮತ್ತು ಮಲಪ್ರಭಾ ಪ್ರವಾಹದಿಂದ ಜನರ ಬದುಕು ಬೀದಿಗೆ ಬಂದಿದ್ದು ರಾಜ್ಯ ಮತ್ತು ಕೇಂದ್ರ ಸರಕಾರ ನೀಡುವ ಪರಿಹಾರ ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ನೆರೆಗೆ ತುತ್ತಾದ ರೈತರಿಗೆ ಎಕರೆಗೆ ಒಂದು ಲಕ್ಷ ಮತ್ತು ಮನೆ ಕಳೆದುಕೊಂಡವರಿಗೆ ಹತ್ತುಲಕ್ಷ ಪರಿಹಾರ ನೀಡಬೇಕು ಎಂದು ರೈತ ಸಂಘ, ಹಸಿರು ಸೇನೆ ಸದಸ್ಯರು ಕೇಂದ್ರ ಅಧ್ಯಯನ ತಂಡಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.

Vijaya Karnataka 28 Aug 2019, 5:00 am
ನರಗುಂದ: ಬೆಣ್ಣೆ ಹಳ್ಳ ಮತ್ತು ಮಲಪ್ರಭಾ ಪ್ರವಾಹದಿಂದ ಜನರ ಬದುಕು ಬೀದಿಗೆ ಬಂದಿದ್ದು ರಾಜ್ಯ ಮತ್ತು ಕೇಂದ್ರ ಸರಕಾರ ನೀಡುವ ಪರಿಹಾರ ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ನೆರೆಗೆ ತುತ್ತಾದ ರೈತರಿಗೆ ಎಕರೆಗೆ ಒಂದು ಲಕ್ಷ ಮತ್ತು ಮನೆ ಕಳೆದುಕೊಂಡವರಿಗೆ ಹತ್ತುಲಕ್ಷ ಪರಿಹಾರ ನೀಡಬೇಕು ಎಂದು ರೈತ ಸಂಘ, ಹಸಿರು ಸೇನೆ ಸದಸ್ಯರು ಕೇಂದ್ರ ಅಧ್ಯಯನ ತಂಡಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.
Vijaya Karnataka Web per acre demanding relief of 10 lakhs per household
ಎಕರೆಗೆ 1, ಮನೆಗೆ 10 ಲಕ್ಷ ಪರಿಹಾರಕ್ಕೆ ಒತ್ತಾಯ


ಪಟ್ಟಣಕ್ಕೆ ಆಗಮಿಸಿದ ಕೇಂದ್ರ ಅಧ್ಯಯನ ತಂಡಕ್ಕೆ ಮನವಿ ಸಲ್ಲಿಸಿ ನೆರೆ ಪ್ರದೇಶದ ಜನರ ಸ್ಥಿತಿ ಚಿಂತಾಜನಕವಾಗಿದೆ. ಜಿಲ್ಲೆಯಲ್ಲಿ11ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿಬೆಳೆ ಹಾನಿಯಾಗಿದೆ. ಪ್ರವಾಹಕ್ಕೆ ಕೃಷಿ ಭೂಮಿಯ ಮಣ್ಣು ಕೊಚ್ಚಿ ಹೋಗಿದ್ದರಿಂದ ಬಿತ್ತನೆ ಮಾಡಲಾಗದ ಸ್ಥಿತಿ ಇರುವಾಗ ಮನೆಗಳು ಕೊಚ್ಚಿ ಹೋಗಿವೆ. ಕೆಲವು ಕುಸಿದು ಬಿದಿದ್ದು ಇನ್ನೂ ಬೀಳುವ ಸ್ಥಿತಿಯಲ್ಲಿವೆ. ಗ್ರಾಮಗಳಲ್ಲಿನೆರೆಯಿಂದ ಸಂಕ್ರಾಮಿಕ ರೋಗದ ಬೀತಿ ಆವರಿಸಿದೆ. ಆನಾರೋಗ್ಯದಲ್ಲಿಸಿಲುಕಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲು ಆಗದ ಪರಿಸ್ಥಿತಿ ಇದೆ.

ನೆರೆ ಸಂತ್ರಸ್ತ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು ಅಂತಹ ಮಕ್ಕಳಿಗೆ ಶಿಕ್ಷಣದ ಖರ್ಚು ವೆಚ್ಚ ಭರಿಸಬೇಕು. ನೆರೆಯಿಂದ ಹಾನಿಯಾದ ಬೆಳೆ, ಬಿದ್ದ ಮನೆಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ನಗರ ಅಧ್ಯಕ್ಷ ವಿಠಲ ಜಾಧವ, ಚನ್ನು ನಂದಿ, ಕರವೆ ಅಧ್ಯಕ್ಷ ನಬಿಸಾಬ ಕಿಲ್ಲೇದಾರ,ರವಿ ಒಡೆಯರ, ಬಸವರಾಜ ಸೊಪ್ಪಿನ, ವಿಜಯ ಕೋತಿನ ಮುಂತಾದವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ