ಆ್ಯಪ್ನಗರ

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಲಕ್ಕುಂಡಿ: ಜಮ್ಮು ಕಾಶ್ಮೀರ ಪುಲ್ವಾಮನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರ ಮರಣವನ್ನಪ್ಪಿದ ದೇಶದ ಸೈನಿಕರಿಗೆ ಇಲ್ಲಿಯ ಸಮೀಪದ ತಿಮ್ಮಾಪೂರ ಗ್ರಾಮದ ಗಣ್ಯರು, ಜನಪ್ರತಿನಿಧಿಗಳು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

Vijaya Karnataka 23 Feb 2019, 5:00 am
ಲಕ್ಕುಂಡಿ: ಜಮ್ಮು ಕಾಶ್ಮೀರ ಪುಲ್ವಾಮನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರ ಮರಣವನ್ನಪ್ಪಿದ ದೇಶದ ಸೈನಿಕರಿಗೆ ಇಲ್ಲಿಯ ಸಮೀಪದ ತಿಮ್ಮಾಪೂರ ಗ್ರಾಮದ ಗಣ್ಯರು, ಜನಪ್ರತಿನಿಧಿಗಳು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
Vijaya Karnataka Web pray for martyrs
ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ


ಗ್ರಾಮದ ಪ್ರಮುಖ ಬೀದಿಯಲ್ಲಿ ಮೌನ ಮೆರವಣೆಗೆ ನಡೆಸಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಸಭೆ ಸೇರಿ 5 ನಿಮಿಷ ಮೌನ ಆಚರಿಸಿ 42 ಜನ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಾರ್ವಜನಿಕರು ದೇಣೆಗೆ ನೀಡಿದ ಹಣವನ್ನು ಸಿಂಡಿಕೇಟ್‌ ಬ್ಯಾಂಕ್‌ನಲ್ಲಿರುವ ಸೈನಿಕರ ಕಲ್ಯಾಣ ನಿಧಿಯ ಖಾತೆಗೆ ಜಮೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಉಪಾಧ್ಯಕ್ಷ , ನಮ್ಮ ದೇಶದ ಯೋಧರನ್ನು ಹತ್ಯೆ ಮಾಡಿದ ಉಗ್ರರನ್ನು ಸದೆ ಬಡಿಯಬೇಕು. ಪಾಪಿ ಪಾಕಿಸ್ತಾನದ ಗರ್ವ ಮುರಿಯಬೇಕು ಎಂದರು. ಮಾಜಿ ಸೈನಿಕ ಶಿವಲಿಂಗಪ್ಪ ಕಲ್ಲಳ್ಳಿ, ಭೀಮಪ್ಪ ಎಮ್ಮೆ, ಗ್ರಾಪಂ ಸದಸ್ಯರಾದ ಸೀತಾ ಜೋಗೀನ, ಶರಣಪ್ಪ ಜೊಗೀನ, ಶಾಂತವ್ವ ಅಂಗಡಿ, ಗ್ರಾಮಸ್ಥರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ